<p><strong>ಬೆಂಗಳೂರು</strong>: ನಗರದ ಶಿವಾನಂದ ಮೇಲ್ಸೇತುವೆಯ ಬಳಿ (ಸ್ಟೀಲ್ ಬ್ರಿಡ್ಜ್) ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ‘ಶೇ 40 ಕಮಿಷನ್ ಮೇಲ್ಸೇತುವೆ’ ಎಂಬ ನಾಮಫಲಕ ಅಳವಡಿಸಿ, ಸೋಮವಾರ ವಿನೂತನ ಪ್ರತಿಭಟನೆ ನಡೆಸಿದರು.</p>.<p>ಫಲಕ ತೆರವು ಮಾಡುವಂತೆ ಪೊಲೀಸರು ಸೂಚನೆ ನೀಡಿದರೂ ಪ್ರತಿಭಟನೆ ಮುಂದುವರಿಸಿದಾಗ ಪೊಲೀಸರು– ಎಎಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. ಈ ವೇಳೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.<br /><br />‘ಆರಂಭದಲ್ಲಿ ಸ್ಟೀಲ್ ಬ್ರಿಡ್ಜ್ಗೆ ₹ 19 ಕೋಟಿ ಅನುದಾನ ನಿಗದಿ ಪಡಿಸಲಾಗಿತ್ತು. ಕಾಮಗಾರಿ ನಿಧಾನಗತಿಯಲ್ಲಿ ನಡೆದು ಅನುದಾನವು ₹ 39 ಕೋಟಿಗೆ ಏರಿಕೆಯಾಗಿದೆ. ಆದರೂ, ಕಾಮಗಾರಿ ಕಳಪೆಯಾಗಿದೆ. ರಾಜ್ಯ ಸರ್ಕಾರವು ಜನರ ಹಣವನ್ನು ಲೂಟಿ ಮಾಡಿದೆ’ ಎಂದು ನಗರ ಅಧ್ಯಕ್ಷರಾದ ಮೋಹನ್ ದಾಸರಿ ದೂರಿದರು.<br /><br />‘ಶೇ 40 ಕಮಿಷನ್ನಲ್ಲಿ ಮುಳುಗಿರುವ ಬಿಜೆಪಿಗೆ ಮುಂದೆ ತಕ್ಕಪಾಠ ಕಲಿಸಲಾಗುವುದು. ನಗರದಲ್ಲಿ ಇದೇ ರೀತಿ ಅನೇಕ ಕಾಮಗಾರಿಗಳಿಗೆ 3ರಿಂದ 4 ಪಟ್ಟು ಅನುದಾನ ಹೆಚ್ಚಿಸಲು ಸಮಯ ವ್ಯರ್ಥ ಮಾಡಲಾಗಿದೆ. ಎಲ್ಲ ಪ್ರಕರಣಗಳ ಸಮಗ್ರ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು.<br /><br />ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ವಿಜಯ್ ಶರ್ಮಾ, ಮುಖಂಡರಾದ ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು, ಶಾಶಾವಲಿ, ಉಷಾ ಮೋಹನ್, ಸುಹಾಸಿನಿ ಪಣಿರಾಜ್, ಗೋಪಿನಾಥ್ ಹಾಜರಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/karnataka-40-per-commission-scam-siddaramaiah-demands-judicial-inquiry-966136.html" target="_blank"><strong>40 ಪರ್ಸೆಂಟ್ ಕಮಿಷನ್ ಆರೋಪ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಗರದ ಶಿವಾನಂದ ಮೇಲ್ಸೇತುವೆಯ ಬಳಿ (ಸ್ಟೀಲ್ ಬ್ರಿಡ್ಜ್) ಆಮ್ ಆದ್ಮಿ ಪಕ್ಷದ (ಎಎಪಿ) ಕಾರ್ಯಕರ್ತರು ‘ಶೇ 40 ಕಮಿಷನ್ ಮೇಲ್ಸೇತುವೆ’ ಎಂಬ ನಾಮಫಲಕ ಅಳವಡಿಸಿ, ಸೋಮವಾರ ವಿನೂತನ ಪ್ರತಿಭಟನೆ ನಡೆಸಿದರು.</p>.<p>ಫಲಕ ತೆರವು ಮಾಡುವಂತೆ ಪೊಲೀಸರು ಸೂಚನೆ ನೀಡಿದರೂ ಪ್ರತಿಭಟನೆ ಮುಂದುವರಿಸಿದಾಗ ಪೊಲೀಸರು– ಎಎಪಿ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ಬಿಡುಗಡೆ ಮಾಡಿದರು. ಈ ವೇಳೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.<br /><br />‘ಆರಂಭದಲ್ಲಿ ಸ್ಟೀಲ್ ಬ್ರಿಡ್ಜ್ಗೆ ₹ 19 ಕೋಟಿ ಅನುದಾನ ನಿಗದಿ ಪಡಿಸಲಾಗಿತ್ತು. ಕಾಮಗಾರಿ ನಿಧಾನಗತಿಯಲ್ಲಿ ನಡೆದು ಅನುದಾನವು ₹ 39 ಕೋಟಿಗೆ ಏರಿಕೆಯಾಗಿದೆ. ಆದರೂ, ಕಾಮಗಾರಿ ಕಳಪೆಯಾಗಿದೆ. ರಾಜ್ಯ ಸರ್ಕಾರವು ಜನರ ಹಣವನ್ನು ಲೂಟಿ ಮಾಡಿದೆ’ ಎಂದು ನಗರ ಅಧ್ಯಕ್ಷರಾದ ಮೋಹನ್ ದಾಸರಿ ದೂರಿದರು.<br /><br />‘ಶೇ 40 ಕಮಿಷನ್ನಲ್ಲಿ ಮುಳುಗಿರುವ ಬಿಜೆಪಿಗೆ ಮುಂದೆ ತಕ್ಕಪಾಠ ಕಲಿಸಲಾಗುವುದು. ನಗರದಲ್ಲಿ ಇದೇ ರೀತಿ ಅನೇಕ ಕಾಮಗಾರಿಗಳಿಗೆ 3ರಿಂದ 4 ಪಟ್ಟು ಅನುದಾನ ಹೆಚ್ಚಿಸಲು ಸಮಯ ವ್ಯರ್ಥ ಮಾಡಲಾಗಿದೆ. ಎಲ್ಲ ಪ್ರಕರಣಗಳ ಸಮಗ್ರ ತನಿಖೆ ಆಗಬೇಕು’ ಎಂದು ಆಗ್ರಹಿಸಿದರು.<br /><br />ಪ್ರತಿಭಟನೆಯಲ್ಲಿ ಉಪಾಧ್ಯಕ್ಷ ವಿಜಯ್ ಶರ್ಮಾ, ಮುಖಂಡರಾದ ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಚನ್ನಪ್ಪಗೌಡ ನಲ್ಲೂರು, ಶಾಶಾವಲಿ, ಉಷಾ ಮೋಹನ್, ಸುಹಾಸಿನಿ ಪಣಿರಾಜ್, ಗೋಪಿನಾಥ್ ಹಾಜರಿದ್ದರು.</p>.<p><strong>ಇದನ್ನೂ ಓದಿ–</strong><a href="https://www.prajavani.net/karnataka-news/karnataka-40-per-commission-scam-siddaramaiah-demands-judicial-inquiry-966136.html" target="_blank"><strong>40 ಪರ್ಸೆಂಟ್ ಕಮಿಷನ್ ಆರೋಪ: ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಒತ್ತಾಯ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>