ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು ‘ಆರೋಗ್ಯ ಇಲಾಖೆಯ ಕೋವಿಡ್ ಬುಲೆಟಿನ್ ಪ್ರಕಾರ ಆಗಸ್ಟ್ 2ರವರೆಗೆ ರಾಜ್ಯದಲ್ಲಿ 36 ಸಾವಿರ ಜನ ಮೃತಪಟ್ಟಿದ್ದಾರೆ. ಇಲಾಖೆಯು ಸಾರ್ವಜನಿಕ ಲೆಕ್ಕಪತ್ರ ಸಮಿತಿಗೆ ಸಲ್ಲಿಸಿರುವ ವರದಿಯಲ್ಲಿ ಕೇವಲ 14,371 ಮಂದಿ ಸಾವಿಗೀಡಾಗಿರುವುದಾಗಿ ತಿಳಿಸಲಾಗಿದೆ. ಇಲಾಖೆ ನೀಡಿರುವ ವ್ಯತಿರಿಕ್ತ ಅಂಕಿ ಅಂಶಗಳನ್ನು ಗಮನಿಸಿದರೆ ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿರುವುದು ಸ್ಪಷ್ಟವಾಗುತ್ತದೆ. ರಾಜ್ಯದಲ್ಲಿ ಈವರೆಗೆ 3 ಲಕ್ಷ ಜನ ಕೋವಿಡ್ನಿಂದ ಸತ್ತಿರುವುದಾಗಿ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದೆ. ವಿರೋಧ ಪಕ್ಷದವರೂ ಇದನ್ನೇ ಹೇಳುತ್ತಿದ್ದಾರೆ’ ಎಂದರು.