ಪಕ್ಷದ ಮಾಧ್ಯಮ ಕಚೇರಿಯಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಗೃಹ ಸಚಿವರಾಗಿ ವೈಫಲ್ಯ ಕಂಡಿದ್ದ ಬಸವರಾಜ ಬೊಮ್ಮಾಯಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲಾಗಿದೆ. ಈ ಹುದ್ದೆಗೆ ಅವರು ನ್ಯಾಯ ಒದಗಿಸಬಲ್ಲರೇ. ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಏರುತ್ತಲೇ ಇವೆ. ಮಕ್ಕಳು, ಮಹಿಳೆಯರು ನಿರ್ಭೀತಿಯಿಂದ ಓಡಾಡುವುದೂ ಕಷ್ಟವಾಗಿದೆ’ ಎಂದು ದೂರಿದರು.