ಪಕ್ಷದ ಬೆಂಗಳೂರು ನಗರ ಘಟಕ ಉಪಾಧ್ಯಕ್ಷ ಸುರೇಶ್ ರಾಥೋಡ್, ‘ಬೆಂಗಳೂರು ವ್ಯಾಪ್ತಿಯಲ್ಲಿ ಸಿಸಿಟಿವಿ ಕ್ಯಾಮೆರಾ ನಿಗಾ ವ್ಯವಸ್ಥೆ ರೂಪಿಸಲು ನಾಲ್ಕು ವರ್ಷಗಳು ಬೇಕೇ? ಶಿಸ್ತುಪಾಲನೆ ದೃಷ್ಟಿಯಲ್ಲಿ ಹಿರಿಯ ಅಧಿಕಾರಿಗಳು ಕೆಳಹಂತದ ಸಿಬ್ಬಂದಿಗೆ ಮಾದರಿಯಾಗಬೇಕು. ಆದರೆ, ಇಲ್ಲಿ ಸೇಫ್ ಸಿಟಿ ಟೆಂಡರ್ ಪ್ರಕ್ರಿಯೆ ವಿಚಾರವಾಗಿ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಡಿ.ರೂಪಾ ನಡುವಿನ ಜಟಾಪಟಿ ನೋಡಿದರೆ, ಆಡಳಿತ ವ್ಯವಸ್ಥೆಯಲ್ಲಿ ಅರಾಜಕತೆ ಉಂಟಾಗಿರುವ ಭಾವನೆ ಮೂಡುತ್ತಿದೆ’ ಎಂದರು.