ಬೆಂಗಳೂರು: ‘ರಾಜ್ಯದ ಕೈಗಾರಿಕಾ ತರಬೇತಿ ಕೇಂದ್ರಗಳಿಗೆ ಟೂಲ್ಸ್ ಕಿಟ್ ಖರೀದಿಸಿ, ವಿತರಿಸುವ ಟೆಂಡರ್ನಲ್ಲಿ ಅಕ್ರಮ ನಡೆದಿದ್ದು, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಚಿವ ಸಿ.ಎನ್.ಅಶ್ವತ್ಥ ನಾರಾಯಣ ಅವರ ನೇರ ಹಸ್ತಕ್ಷೇಪ ಹಾಗೂ ಕೈವಾಡ ಇದೆ’ ಎಂದು ಆಮ್ ಅದ್ಮಿ ಪಕ್ಷದ (ಎಎಪಿ) ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಆರೋಪಿಸಿದರು.