ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ದಿನೇಶ್ ಗುಂಡೂರಾವ್ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸಿ, ಹೊರ ರಾಜ್ಯಗಳಲ್ಲೇ ವಾಸ್ತವ್ಯ ಹೂಡುತ್ತಿದ್ದಾರೆ. ಅವರಿಗೆ ಶಾಸಕ ಸ್ಥಾನಕ್ಕಿಂತ ಗೋವಾ ಮತ್ತು ತಮಿಳುನಾಡಿನ ಕಾಂಗ್ರೆಸ್ ಉಸ್ತುವಾರಿಯೇ ಮುಖ್ಯವಾಗಿದೆ. ಆದರೆ, ಅವರಿಗೆ ಮತ ನೀಡಿದ ಕ್ಷೇತ್ರದ ಜನ ತೊಂದರೆಗಳಲ್ಲಿ ಸಿಲುಕಿದ್ದಾರೆ’ ಎಂದರು.