‘ಬಿಬಿಎಂಪಿ ವ್ಯಾಪ್ತಿಯಲ್ಲಿ ಮೂಲಸೌಕರ್ಯಗಳ ವಿಭಾಗ ಹಾಗೂ ರಾಜಕಾಲುವೆ ವಿಭಾಗಗಳಲ್ಲಿ ನಕಲಿ ದಾಖಲೆಗಳನ್ನು ನೀಡಿ ಕೋಟ್ಯಂತರ ರೂಪಾಯಿಗಳ ಟೆಂಡರ್ಗಳನ್ನು ಗುತ್ತಿಗೆದಾರರು ಅಕ್ರಮ ಮಾರ್ಗದಲ್ಲಿ ಪಡೆದಿದ್ದಾರೆ. ಕಾಮಗಾರಿಯ ಗುತ್ತಿಗೆ ನೀಡುವಾಗ ಅಧಿಕಾರಿಗಳು ಸರಿಯಾಗಿ ತಾಂತ್ರಿಕ ಮೌಲ್ಯಮಾಪನ ಮಾಡಿಲ್ಲ. ಅಕ್ರಮದಲ್ಲಿ ಸಚಿವ ವಿ.ಸೋಮಣ್ಣ, ಶಾಸಕರಾದ ಅರವಿಂದ ಲಿಂಬಾವಳಿ, ಎಸ್.ಆರ್.ವಿಶ್ವನಾಥ್ , ಸತೀಶ್ ರೆಡ್ಡಿ ಹಾಗೂ ಬಿಜೆಪಿ ಮುಖಂಡ ಮುನಿರತ್ನ ಭಾಗಿಯಾಗಿದ್ದಾರೆ’ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.