ಪಕ್ಷದ ರಾಜ್ಯ ಮುಖ್ಯ ವಕ್ತಾರ ಶರತ್ ಖಾದ್ರಿ,‘ಸ್ಥಳೀಯ ಸಂಸ್ಥೆಗಳಿಗೆ ಇದ್ದ ಅಧಿಕಾರವನ್ನು ಸರ್ಕಾರ ಕಸಿದುಕೊಂಡಿದೆ. ಅಧಿಕಾರ ವಿಕೇಂದ್ರಿಕರಣ ತತ್ವವನ್ನು ಗಾಳಿಗೆ ತೂರಿ ಸಂಪೂರ್ಣ ಅಧಿಕಾರವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಪಾಲಿಕೆ ಸದಸ್ಯರನ್ನು ಕೇವಲ ಆಟದ ಗೊಂಬೆಗಳನ್ನಾಗಿ ಮಾಡುವ ಕಾಯ್ದೆ ಇದಾಗಿದೆ’ ಎಂದು ಆರೋಪಿಸಿದರು.