ಬೆಂಗಳೂರು: ‘ಸಾರಿಗೆ ನೌಕರರ ಪ್ರತಿಭಟನೆ ಮೂರನೇ ದಿನವೂ ಮುಂದುವರಿದಿದೆ. ಹೀಗಿದ್ದರೂ ಅವರನ್ನು ಕರೆಸಿ ಮಾತನಾಡುವ ಕೆಲಸವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಮಾಡಿಲ್ಲ. ಬದಲಾಗಿ ದಮನಕಾರಿ ನೀತಿಯ ಮೂಲಕ ಹೋರಾಟ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ. ಈ ಧೋರಣೆ ಕೈಬಿಟ್ಟು ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಮುಂದಾಗಬೇಕು’ ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಒತ್ತಾಯಿಸಿದರು.