ಎಎಪಿ ರಾಜ್ಯ ಘಟಕದ ಉಪಾಧ್ಯಕ್ಷ ಮತ್ತು ಬಿಬಿಎಂಪಿ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷ ಭಾಸ್ಕರ್ ರಾವ್ ಮಾತನಾಡಿ, ‘ಜನರು ಪಾವತಿಸುವ ತೆರಿಗೆ ಸಾರ್ವಜನಿಕರ ಅಭಿವೃದ್ಧಿಗೆ ಬಳಸಬೇಕೇ ಹೊರತು ರಾಜಕಾರಣಿಗಳ ಏಳ್ಗೆಗೆ ಅಲ್ಲ. ಎಎಪಿ ಅಧಿಕಾರಕ್ಕೆ ಬಂದರೆ ಬೆಂಗಳೂರಿನಲ್ಲಿ ಸುಸಜ್ಜಿತ ಶಾಲೆ, ಆಸ್ಪತ್ರೆ ಉತ್ತಮ ರಸ್ತೆ, ನೀರಿನ ವ್ಯವಸ್ಥೆ ಕಲ್ಪಿಸಿ ಜನಪರ ಪ್ರಾಮಾಣಿಕ ಆಡಳಿತ ನೀಡುತ್ತೇವೆ’ ಎಂದು ಭರವಸೆ ನೀಡಿದರು.