ಬೆಂಗಳೂರು: ಭಾನುವಾರ ರಾತ್ರಿ ಸುರಿದ ಮಳೆಯಿಂದಾಗಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿವೆ. ಮೆಟ್ರೊ ಲೈನ್ ಮೇಲೆ ಮರ ಬಿದ್ದಿದ್ದು, ಅಂಡರ್ಪಾಸ್ಗಳು ಜಲಾವೃತಗೊಂಡು, ಸಂಚಾರ ದಟ್ಟಣೆ ಉಂಟಾಗಿದೆ. ನಗರದ ಜನ ಹೈರಾಣಾಗಿದ್ದಾರೆ. ಆದರೆ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಮ್ ಆದ್ಮಿ ಪಕ್ಷದ ನಗರ ಘಟಕದ ಅಧ್ಯಕ್ಷ ಸತೀಶ್ ಕುಮಾರ್ ದೂರಿದರು.