ಎಎಪಿ ನಗರ ಘಟಕದ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪಗೌಡ ನೆಲ್ಲೂರು ಮಾತನಾಡಿ, ‘ಕಳಂಕಿತ ಕೆ.ಎಸ್. ಈಶ್ವರಪ್ಪ ಅವರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಹುನ್ನಾರ ನಡೆಸಿದೆ. ಇದಕ್ಕಾಗಿ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್ಚಿಟ್ ನೀಡಲಾಗಿದೆ. ಸಂತೋಷ್ ಪಾಟೀಲ ಆತ್ಮಹತ್ಯೆಗೂ ಮುನ್ನ ಈಶ್ವರಪ್ಪನವರ ವಿರುದ್ಧ ವಾಟ್ಸ್ ಆ್ಯಪ್ನಲ್ಲಿ ಡೆತ್ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದರು. ಆದರೆ ಈಗ ಈಶ್ವರಪ್ಪ ಅವರ ವಿಚಾರಣೆ ನಡೆಸದೇ ಕ್ಲೀನ್ ಚಿಟ್ ನೀಡಿರುವುದು ಖಂಡನೀಯ’ ಎಂದರು.