<p><strong>ಬೆಂಗಳೂರು</strong>: ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರುಮೌರ್ಯ ವೃತ್ತದಲ್ಲಿ ಸೌದೆ ಒಲೆಯಲ್ಲಿ ಟೀ ಮಾಡಿ ಹಂಚುವ ಮೂಲಕ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳದ ವಿರುದ್ದಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು, ‘ಸೌದೆಗಾದ್ರೂ ಸಬ್ಸಿಡಿ ಕೊಡು ಗುರು’ ಎಂಬ ಘೋಷಣೆಗಳನ್ನು ಕೂಗುತ್ತಾ ಎಲ್ಪಿಜಿ ದರ ಹೆಚ್ಚಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ,‘ಎಲ್ಪಿಜಿ ಸಿಲಿಂಡರ್ಗಳ ದರವನ್ನು ಡಿಸೆಂಬರ್ನಲ್ಲೇ ಎರಡು ಬಾರಿ ಹೆಚ್ಚಳ ಮಾಡಿ, ಜನರ ಸುಲಿಗೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ದೋಚುತ್ತಿದೆ’ ಎಂದು ಆರೋಪಿಸಿದರು.</p>.<p>‘ಲಾಕ್ಡೌನ್ ನೆಪದಲ್ಲಿ ಸಬ್ಸಿಡಿ ನಿಲ್ಲಿಸಿ, ₹20 ಸಾವಿರ ಕೋಟಿ ಉಳಿತಾಯ ಮಾಡಿದೆ. ಆದರೂ ದರ ಹೆಚ್ಚಳ ಏಕೆ? ಮಾರುಕಟ್ಟೆಯಲ್ಲಿ ಸೌದೆಯ ಬೆಲೆಯೂ ಗಗನಕ್ಕೇರಿದೆ. ಹಾಗಾಗಿ, ಸೌದೆಗಾದರೂ ಸಬ್ಸಿಡಿ ಕೊಟ್ಟರೆ, ಎರಡು ಹೊತ್ತು ಊಟ ಮಾಡಿ ಜೀವ ಉಳಿಸಿಕೊಳ್ಳುತ್ತೇವೆ’ ಎಂದು ವ್ಯಂಗ್ಯವಾಡಿದರು.</p>.<p>‘ಒಲೆಯಲ್ಲಿ ಅಡುಗೆ ಮಾಡುವುದರಿಂದ ಮಾಲಿನ್ಯ ತಪ್ಪಿಸಬಹುದು ಎಂದುಕೇಂದ್ರ ಸರ್ಕಾರ ಎಲ್ಪಿಸಿ ಸಂಪರ್ಕ ಕಲ್ಪಿಸಿದೆ. ಈಗ ದರ ಏರಿಸಿ,ಸುಲಿಗೆ ಮಾಡುತ್ತಿದೆ. ದರ ಹೆಚ್ಚಳ ನಿರ್ಧಾರ ಹಿಂಪಡೆಯದಿದ್ದರೆ, ಸೌದೆಯನ್ನು ಪ್ರಧಾನಿ ಕಚೇರಿಗೆ ಪಾರ್ಸೆಲ್ ಮಾಡಲಾಗುವುದು’ ಎಂದರು.</p>.<p>ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಹಿಳಾ ಘಟಕದ ಉಪಾಧ್ಯಕ್ಷೆ ಮಾಯಾ ಪ್ರದೀಪ್, ವೈದ್ಯೆ ಪೂರ್ಣಿಮಾ ನಾಯ್ಡು, ಪ್ರತಿಮಾ ಮಲಾನಿ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರುಮೌರ್ಯ ವೃತ್ತದಲ್ಲಿ ಸೌದೆ ಒಲೆಯಲ್ಲಿ ಟೀ ಮಾಡಿ ಹಂಚುವ ಮೂಲಕ ಎಲ್ಪಿಜಿ ಸಿಲಿಂಡರ್ ದರ ಹೆಚ್ಚಳದ ವಿರುದ್ದಶನಿವಾರ ಪ್ರತಿಭಟನೆ ನಡೆಸಿದರು.</p>.<p>ಪಕ್ಷದ ಮಹಿಳಾ ಘಟಕದ ಕಾರ್ಯಕರ್ತರು, ‘ಸೌದೆಗಾದ್ರೂ ಸಬ್ಸಿಡಿ ಕೊಡು ಗುರು’ ಎಂಬ ಘೋಷಣೆಗಳನ್ನು ಕೂಗುತ್ತಾ ಎಲ್ಪಿಜಿ ದರ ಹೆಚ್ಚಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.</p>.<p>ಮಹಿಳಾ ಘಟಕದ ಅಧ್ಯಕ್ಷೆ ಕುಶಲ ಸ್ವಾಮಿ,‘ಎಲ್ಪಿಜಿ ಸಿಲಿಂಡರ್ಗಳ ದರವನ್ನು ಡಿಸೆಂಬರ್ನಲ್ಲೇ ಎರಡು ಬಾರಿ ಹೆಚ್ಚಳ ಮಾಡಿ, ಜನರ ಸುಲಿಗೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಜನಸಾಮಾನ್ಯರನ್ನು ದೋಚುತ್ತಿದೆ’ ಎಂದು ಆರೋಪಿಸಿದರು.</p>.<p>‘ಲಾಕ್ಡೌನ್ ನೆಪದಲ್ಲಿ ಸಬ್ಸಿಡಿ ನಿಲ್ಲಿಸಿ, ₹20 ಸಾವಿರ ಕೋಟಿ ಉಳಿತಾಯ ಮಾಡಿದೆ. ಆದರೂ ದರ ಹೆಚ್ಚಳ ಏಕೆ? ಮಾರುಕಟ್ಟೆಯಲ್ಲಿ ಸೌದೆಯ ಬೆಲೆಯೂ ಗಗನಕ್ಕೇರಿದೆ. ಹಾಗಾಗಿ, ಸೌದೆಗಾದರೂ ಸಬ್ಸಿಡಿ ಕೊಟ್ಟರೆ, ಎರಡು ಹೊತ್ತು ಊಟ ಮಾಡಿ ಜೀವ ಉಳಿಸಿಕೊಳ್ಳುತ್ತೇವೆ’ ಎಂದು ವ್ಯಂಗ್ಯವಾಡಿದರು.</p>.<p>‘ಒಲೆಯಲ್ಲಿ ಅಡುಗೆ ಮಾಡುವುದರಿಂದ ಮಾಲಿನ್ಯ ತಪ್ಪಿಸಬಹುದು ಎಂದುಕೇಂದ್ರ ಸರ್ಕಾರ ಎಲ್ಪಿಸಿ ಸಂಪರ್ಕ ಕಲ್ಪಿಸಿದೆ. ಈಗ ದರ ಏರಿಸಿ,ಸುಲಿಗೆ ಮಾಡುತ್ತಿದೆ. ದರ ಹೆಚ್ಚಳ ನಿರ್ಧಾರ ಹಿಂಪಡೆಯದಿದ್ದರೆ, ಸೌದೆಯನ್ನು ಪ್ರಧಾನಿ ಕಚೇರಿಗೆ ಪಾರ್ಸೆಲ್ ಮಾಡಲಾಗುವುದು’ ಎಂದರು.</p>.<p>ಬೆಂಗಳೂರು ನಗರ ಘಟಕದ ಅಧ್ಯಕ್ಷ ಮೋಹನ್ ದಾಸರಿ, ಮಹಿಳಾ ಘಟಕದ ಉಪಾಧ್ಯಕ್ಷೆ ಮಾಯಾ ಪ್ರದೀಪ್, ವೈದ್ಯೆ ಪೂರ್ಣಿಮಾ ನಾಯ್ಡು, ಪ್ರತಿಮಾ ಮಲಾನಿ, ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>