ಎಎಪಿ ರಾಜ್ಯ ವಕ್ತಾರ ಕೆ. ಮಥಾಯಿ, ‘ನ್ಯಾಯಮೂರ್ತಿ ಎಚ್.ಸಿ. ಸಂದೇಶ್ ಮಾಡಿರುವ ಆರೋಪ ವನ್ನು ಗಂಭೀರವಾಗಿ ಪರಿಗಣಿಸಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಪಿಎಸ್ಐ ನೇಮಕಾತಿಯಲ್ಲಿ ನಡೆದ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಅಮ್ರಿತ್ ಪೌಲ್ ವಿರುದ್ಧದ ಆರೋಪ ಗಳಲ್ಲಿ ಅಶ್ವತ್ಥನಾರಾಯಣ ಮತ್ತು ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಹೆಸರು ಕೇಳಿಬರುತ್ತಿದೆ. ಇವರಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸಬೇಕು’ ಎಂದು ಆಗ್ರಹಿಸಿದರು.