<p><strong>ಪೀಣ್ಯ ದಾಸರಹಳ್ಳಿ:</strong> ಅಬ್ಬಿಗೆರೆಯಲ್ಲಿ ಪುನರುಜ್ಜೀವನವಾಗಿರುವ ಸೀತಾ ರಾಮಾಂಜನೇಯ ಸ್ವಾಮಿ ಹಾಗೂ ಪದ್ಮಾವತಿ ಸಮೇತ ವೆಂಕಟೇಶ್ವರ ಸ್ವಾಮಿ ದೇವಾಲಯ ನ.2 ರಂದು ಉದ್ಘಾಟನೆಯಾಗಲಿದೆ ಎಂದು ದೇಗುಲದ ಟ್ರಸ್ಟ್ ಮುಖ್ಯಸ್ಥ ಕೆ.ನಾಗಭೂಷಣ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಎಸ್.ಮುನಿರಾಜು, ಮಾಜಿ ಶಾಸಕ ಆರ್. ಮಂಜುನಾಥ್ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಅ.31 ರಿಂದ ನ.3 ರವರೆಗೆ 5 ದಿನಗಳ ಕಾಲ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದ್ದು, ನ.2 ರವರೆಗೆ ಕುಂಭಾಭಿಷೇಕ ಮತ್ತು ಪೂಜಾ ವಿಧಿ ವಿಧಾನಗಳು ನಡೆಯಲಿವೆ ಎಂದು ವಿವರಿಸಿದರು.</p>.<p>ಮೊದಲಿಗೆ ಸೀತಾರಾಮಾಂಜನೇಯ ವಿಗ್ರಹಗಳಿದ್ದು ಈಗ ಪದ್ಮಾವತಿ ಸಮೇತ ವೆಂಕಟೇಶ್ವರ ಸ್ವಾಮಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> ಅಬ್ಬಿಗೆರೆಯಲ್ಲಿ ಪುನರುಜ್ಜೀವನವಾಗಿರುವ ಸೀತಾ ರಾಮಾಂಜನೇಯ ಸ್ವಾಮಿ ಹಾಗೂ ಪದ್ಮಾವತಿ ಸಮೇತ ವೆಂಕಟೇಶ್ವರ ಸ್ವಾಮಿ ದೇವಾಲಯ ನ.2 ರಂದು ಉದ್ಘಾಟನೆಯಾಗಲಿದೆ ಎಂದು ದೇಗುಲದ ಟ್ರಸ್ಟ್ ಮುಖ್ಯಸ್ಥ ಕೆ.ನಾಗಭೂಷಣ್ ತಿಳಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಿ. ಪರಮೇಶ್ವರ್, ರಾಮಲಿಂಗಾರೆಡ್ಡಿ, ಕೃಷ್ಣ ಬೈರೇಗೌಡ, ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಶಾಸಕ ಎಸ್.ಮುನಿರಾಜು, ಮಾಜಿ ಶಾಸಕ ಆರ್. ಮಂಜುನಾಥ್ ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.</p>.<p>ಅ.31 ರಿಂದ ನ.3 ರವರೆಗೆ 5 ದಿನಗಳ ಕಾಲ ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದ್ದು, ನ.2 ರವರೆಗೆ ಕುಂಭಾಭಿಷೇಕ ಮತ್ತು ಪೂಜಾ ವಿಧಿ ವಿಧಾನಗಳು ನಡೆಯಲಿವೆ ಎಂದು ವಿವರಿಸಿದರು.</p>.<p>ಮೊದಲಿಗೆ ಸೀತಾರಾಮಾಂಜನೇಯ ವಿಗ್ರಹಗಳಿದ್ದು ಈಗ ಪದ್ಮಾವತಿ ಸಮೇತ ವೆಂಕಟೇಶ್ವರ ಸ್ವಾಮಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>