ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಅಪಹರಣ

Published 20 ಸೆಪ್ಟೆಂಬರ್ 2023, 16:12 IST
Last Updated 20 ಸೆಪ್ಟೆಂಬರ್ 2023, 16:12 IST
ಅಕ್ಷರ ಗಾತ್ರ

ಬೆಂಗಳೂರು: ಗೋಮಾಂಸ ಸಾಗಿಸುತ್ತಿದ್ದ ವ್ಯಕ್ತಿಯನ್ನು ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಅಪಹರಿಸಿದ ಮಾಂಸ ಮಾರಾಟ ಅಂಗಡಿಯ ಮಾಲೀಕ ಸೇರಿದಂತೆ ನಾಲ್ವರನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

ಅಂಗಡಿ ಮಾಲೀಕ ಮೊಹಮ್ಮದ್, ಮಧು, ದಿನೇಶ್, ಕಾರ್ತಿಕ್ ಬಂಧಿತರು.

‘ಸೆ.10ರಂದು ಜಾವೀದ್ ಮಹಮದ್ ಎಂಬುವರು ಗಾಡಿಯಲ್ಲಿ ಗೋಮಾಂಸ ತುಂಬಿಕೊಂಡು ರಾಮನಗರದಿಂದ ಬೆಂಗಳೂರಿನ ತಿಲಕನಗರಕ್ಕೆ ಬರುತ್ತಿದ್ದರು. ಮೈಕೋಲೇಔಟ್ ಸಿಗ್ನಲ್ ಬಳಿ ಜಾವೀದ್‌ನನ್ನು ಆರೊಪಿಗಳು ಅಡ್ಡಗಟ್ಟಿ ಆರ್‌ಎಸ್‌ಎಸ್ ಕಾರ್ಯಕರ್ತರೆಂದು ಹೇಳಿ ಬೆದರಿಸಿದ್ದರು. ಬಳಿಕ ಜಾವೀದ್‌ನನ್ನು ಅಪಹರಿಸಿ ₹1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಕೊನೆಗೆ ₹10 ಸಾವಿರ ಪಡೆದು ಜಾವೀದ್‌ನನ್ನು ಬಿಟ್ಟು ಕಳುಹಿಸಿದ್ದರು’ ಎಂದು ಮೂಲಗಳು ಹೇಳಿವೆ.

ಸೇಂಟ್‌ಜಾನ್‌ ಸಿಗ್ನಲ್ ಬಳಿ ವಾಹನ ನಿಲುಗಡೆ ಮಾಡಲಾಗಿದೆ ಎಂದು ಜಾವೀದ್‌ಗೆ ಹೇಳಿದ್ದರು. ಅವರು ಬಂದು ನೋಡುವಾಗ ಗೋಮಾಂಸ ಇರಲಿಲ್ಲ. ಆರ್‌ಎಸ್‌ಎಸ್ ಕಾರ್ಯಕರ್ತರ ಸೋಗಿನಲ್ಲಿ ಆರೋಪಿಗಳು ಗೋಮಾಂಸ ಕಳವು ಮಾಡಿ ಮಾರಾಟ ಮಾಡಿರುವುದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT