‘ಸೆ.2ರಂದು ಮಾನ್ಯತಾ ಟೆಕ್ಪಾರ್ಕ್ನ ಮಾನ್ಯತಾ ರೆಸಿಡೆನ್ಸಿಯಲ್ಲಿ ನೆಲೆಸಿದ್ದ ಎಂ.ಡಿ ಒಬ್ಬರ ಪುತ್ರನನ್ನು ಸಿನಿಮೀಯ ಶೈಲಿಯಲ್ಲಿ ಅಪಹರಣ ಮಾಡಲಾಗಿತ್ತು. ಮನೆಯವರನ್ನು ಬೆದರಿಸಿ, ಎಂ.ಡಿ ಅವರು ಎದುರು ನಿಲುಗಡೆ ಮಾಡಿದ್ದ ಕಾರಿನ ಕೀಯನ್ನೇ ತೆಗೆದುಕೊಂಡು, ಆ ಕಾರಿನಲ್ಲೇ ಬಾಲಕನನ್ನು ಅಪಹರಿಸಿದ್ದರು. ತುಮಕೂರು ರಸ್ತೆಯ ದಾಬಸ್ಪೇಟೆಯಿಂದ ಕರೆ ಮಾಡಿ, ₹ 15 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು. ಹಣ ಕೊಡದಿದ್ದರೆ ಮಗನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.