‘ವ್ಯಕ್ತಿಗೆ ಸೋಂಕು ದೃಢಪಟ್ಟಿದ್ದರೆ ಮಾತ್ರ ಆಸ್ಪತ್ರೆಗೆ ದಾಖಲಿಸಿಕೊಳ್ಳಲಾಗುತ್ತಿದೆ. ಉಸಿರಾಟದ ತೊಂದರೆ ಇದ್ದವರು ಆಸ್ಪತ್ರೆಗೆ ಹೋದರೆ ಸೋಂಕು ದೃಢಪಟ್ಟಿರುವ ವರದಿ ತೋರಿಸಿ ಎನ್ನುತ್ತಿದ್ದಾರೆ. ಹೀಗಾದರೆ ಅವರು ಎಲ್ಲಿಗೆ ಹೋಗಬೇಕು. ಇಷ್ಟೆಲ್ಲ ಆದರೂ ಮೇಯರ್ ಸ್ಪಂದಿಸುತ್ತಿಲ್ಲ. ಈ ಸಮಸ್ಯೆಗಳನ್ನು ಸರಿಪಡಿಸುವ ಕುರಿತು ಚರ್ಚಿಸಲು ಕೂಡಲೇ ಪಾಲಿಕೆ ಕೌನ್ಸಿಲ್ ಸಭೆ ಕರೆಯಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.