<p><strong>ಬೆಂಗಳೂರು</strong>: ‘ಅಭಿಮಾನ್ ಸ್ಟುಡಿಯೊ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಈ ಹಿಂದೆ 10 ಎಕರೆ ಜಮೀನು ಮಾರಾಟದಲ್ಲಿ ಅವ್ಯವಹಾರ ನಡೆದಿದ್ದು, ಸರ್ಕಾರವೂ ಇದರಲ್ಲಿ ಭಾಗಿಯಾಗಿದೆ’ ಎಂದು ಹಾಸ್ಯನಟ ಟಿ.ಎನ್. ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ ಆರೋಪಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರಹಳ್ಳಿ–ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊ ಭೂಮಿಯನ್ನು ಅರಣ್ಯ ಇಲಾಖೆ ಮರಳಿ ಪಡೆಯುತ್ತಿರುವ ಆದೇಶ ಪ್ರತಿ ನನಗೆ ತಲುಪಿಲ್ಲ. ಸರ್ಕಾರವು ಈ ಜಮೀನನ್ನು ಮುಟ್ಟುಗೋಲು ಹಾಕಿಕೊಂಡರೆ, ಕಾನೂನು ಹೋರಾಟ ಮಾಡಲಾಗುವುದು. ನಮ್ಮ ತಂದೆಯ ಹೆಸರಿನಲ್ಲಿ ಇರುವ ಜಾಗವನ್ನು ಉಳಿಸಿಕೊಂಡು, ಅದನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು. </p>.<p>‘ತಂದೆಯ ಜಾಗ ತಂದೆಯ ಹೆಸರಿನಲ್ಲಿಯೇ ಉಳಿಯಬೇಕು. ನಾನು ಅದನ್ನು ಮಾರಾಟ ಮಾಡುವುದಿಲ್ಲ. ಅಲ್ಲಿ ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಿಸಲು ನನ್ನ ಬೆಂಬಲವಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಅಭಿಮಾನ್ ಸ್ಟುಡಿಯೊ ಜಾಗವನ್ನು ಮುಟ್ಟುಗೋಲು ಹಾಕಿಕೊಳ್ಳುವ ಸರ್ಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಈ ಹಿಂದೆ 10 ಎಕರೆ ಜಮೀನು ಮಾರಾಟದಲ್ಲಿ ಅವ್ಯವಹಾರ ನಡೆದಿದ್ದು, ಸರ್ಕಾರವೂ ಇದರಲ್ಲಿ ಭಾಗಿಯಾಗಿದೆ’ ಎಂದು ಹಾಸ್ಯನಟ ಟಿ.ಎನ್. ಬಾಲಕೃಷ್ಣ ಅವರ ಪುತ್ರಿ ಗೀತಾ ಬಾಲಿ ಆರೋಪಿಸಿದರು. </p>.<p>ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಉತ್ತರಹಳ್ಳಿ–ಕೆಂಗೇರಿ ರಸ್ತೆಯಲ್ಲಿರುವ ಅಭಿಮಾನ್ ಸ್ಟುಡಿಯೊ ಭೂಮಿಯನ್ನು ಅರಣ್ಯ ಇಲಾಖೆ ಮರಳಿ ಪಡೆಯುತ್ತಿರುವ ಆದೇಶ ಪ್ರತಿ ನನಗೆ ತಲುಪಿಲ್ಲ. ಸರ್ಕಾರವು ಈ ಜಮೀನನ್ನು ಮುಟ್ಟುಗೋಲು ಹಾಕಿಕೊಂಡರೆ, ಕಾನೂನು ಹೋರಾಟ ಮಾಡಲಾಗುವುದು. ನಮ್ಮ ತಂದೆಯ ಹೆಸರಿನಲ್ಲಿ ಇರುವ ಜಾಗವನ್ನು ಉಳಿಸಿಕೊಂಡು, ಅದನ್ನು ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ’ ಎಂದು ಹೇಳಿದರು. </p>.<p>‘ತಂದೆಯ ಜಾಗ ತಂದೆಯ ಹೆಸರಿನಲ್ಲಿಯೇ ಉಳಿಯಬೇಕು. ನಾನು ಅದನ್ನು ಮಾರಾಟ ಮಾಡುವುದಿಲ್ಲ. ಅಲ್ಲಿ ವಿಷ್ಣುವರ್ಧನ ಅವರ ಸ್ಮಾರಕ ನಿರ್ಮಿಸಲು ನನ್ನ ಬೆಂಬಲವಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>