ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ‘ರಾಜ್ಯಕ್ಕೆ ಪೂರಕವಾಗುವ ರಾಜ್ಯ ಶಿಕ್ಷಣ ನೀತಿ ರೂಪಿಸಲು ಶಿಕ್ಷಣ ತಜ್ಞ ನಿರಂಜನಾರಾಧ್ಯ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ರಾಜ್ಯ ಶಿಕ್ಷಣ ಆಯೋಗ ರಚಿಸಬೇಕು. ಖಾಸಗಿ ಶಾಲೆಗಳನ್ನು ಗುರಿಯಾಗಿಸಿ ರೂಪಿಸಿರುವ ಅಗ್ನಿ ಅವಘಡ ಸುರಕ್ಷತೆ, ಕಟ್ಟಡ ದಕ್ಷತೆ, ಸ್ಥಿರ ನಿಧಿ, ಅನಧಿಕೃತ ಶಾಲೆಗಳ ಪಟ್ಟಿ ಇತ್ಯಾದಿ ಅವೈಜ್ಞಾನಿಕ ನಿರ್ಧಾರಗಳಿಂದ ಆಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಅಧ್ಯಯನ ನಡೆಸಿ, ಆ ವರದಿ ಆಧಾರದಲ್ಲಿ ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.