‘ಕೊಡುಗೆಗಳಿಂತ ಮುಖ್ಯವಾಗಿ ಬಿಬಿಎಂಪಿ ಶಾಲೆಗಳಲ್ಲಿನ ಮೂಲಸೌಕರ್ಯವನ್ನು ಉನ್ನತೀಕರಿಸಬೇಕು. ಕೆಲವು ಶಾಲೆಗಳಲ್ಲಿ ಅಗತ್ಯ ಸೌಕರ್ಯಗಳೇ ಇಲ್ಲ. ಶಿಕ್ಷಕರನ್ನು ಉತ್ತೇಜಿಸಬೇಕು ಎಂಬುದೇನೋ ನಿಜ. ಆದರೆ, ಹಲವು ಶಾಲೆಗಳಲ್ಲಿ ಹಾಜರಾತಿ, ನೋಂದಣಿಯನ್ನು ಹೆಚ್ಚಿಸಬೇಕಿದೆ. ಹೀಗಾಗಿ ಹಣವನ್ನು ಬುದ್ಧಿವಂತಿಕೆಯಿಂದ ಉಪಯೋಗಿಸಿಕೊಳ್ಳಬೇಕು’ ಎಂದು ಬಿಬಿಎಂಪಿಯ ಹಿರಿಯ ಅಧಿಕಾರಿಗಳು ಹೇಳಿದರು.