<p><strong>ಬೆಂಗಳೂರು:</strong> ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಹಕಾರ ಇಲಾಖೆ ನೀಡಿದ ನೋಟಿಸ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ 15 ದಿನಗಳ ಕಾಲಾವಕಾಶ ಕೇಳಿದ್ದಾರೆ. </p>.<p>ಈ ಸಂಬಂಧ ಅವರು ಸಹಕಾರ ಇಲಾಖೆ ಕಾರ್ಯದರ್ಶಿ ಸಂಜಯ ಶೆಟ್ಟಣ್ಣನವರ್ ಅವರಿಗೆ ಪತ್ರ ಬರೆದಿದ್ದಾರೆ. ‘ಸಹೋದರಿ ಪತಿ ಲಿಂಗರಾಜ ಕುರ್ತಕೋಟಿ ಅವರು ಮೃತಪಟ್ಟ ಕಾರಣ, ಲಿಖಿತ ಹೇಳಿಕೆ ನೀಡಲು ಹಾಗೂ ವಿಚಾರಣೆಗೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ. </p>.<p>‘ಮೇಲ್ನೋಟಕ್ಕೆ ಆರೋಪಗಳು ಸಾಬೀತಾಗಿರುವುದರಿಂದ ಏಕೆ ಆಡಳಿತಾಧಿಕಾರಿ ನೇಮಿಸಬಾರದು’ ಎಂದು ನೋಟಿಸ್ನಲ್ಲಿ ಪ್ರಶ್ನಿಸಿದ್ದ ಸಹಕಾರ ಇಲಾಖೆ ಕಾರ್ಯದರ್ಶಿ, ಇದೇ 22ರಂದು ಬೆಳಿಗ್ಗೆ 11.30ರೊಳಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಒಂದು ವೇಳೆ ಹೇಳಿಕೆ ಸಲ್ಲಿಸಲು ತಪ್ಪಿದಲ್ಲಿ ನಿಯಮಾನುಸಾರ ಮುಂದಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಅಧಿಕಾರ ದುರ್ಬಳಕೆ ಸೇರಿ ವಿವಿಧ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಹಕಾರ ಇಲಾಖೆ ನೀಡಿದ ನೋಟಿಸ್ಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ 15 ದಿನಗಳ ಕಾಲಾವಕಾಶ ಕೇಳಿದ್ದಾರೆ. </p>.<p>ಈ ಸಂಬಂಧ ಅವರು ಸಹಕಾರ ಇಲಾಖೆ ಕಾರ್ಯದರ್ಶಿ ಸಂಜಯ ಶೆಟ್ಟಣ್ಣನವರ್ ಅವರಿಗೆ ಪತ್ರ ಬರೆದಿದ್ದಾರೆ. ‘ಸಹೋದರಿ ಪತಿ ಲಿಂಗರಾಜ ಕುರ್ತಕೋಟಿ ಅವರು ಮೃತಪಟ್ಟ ಕಾರಣ, ಲಿಖಿತ ಹೇಳಿಕೆ ನೀಡಲು ಹಾಗೂ ವಿಚಾರಣೆಗೆ ಹಾಜರಾಗಲು 15 ದಿನಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದ್ದಾರೆ. </p>.<p>‘ಮೇಲ್ನೋಟಕ್ಕೆ ಆರೋಪಗಳು ಸಾಬೀತಾಗಿರುವುದರಿಂದ ಏಕೆ ಆಡಳಿತಾಧಿಕಾರಿ ನೇಮಿಸಬಾರದು’ ಎಂದು ನೋಟಿಸ್ನಲ್ಲಿ ಪ್ರಶ್ನಿಸಿದ್ದ ಸಹಕಾರ ಇಲಾಖೆ ಕಾರ್ಯದರ್ಶಿ, ಇದೇ 22ರಂದು ಬೆಳಿಗ್ಗೆ 11.30ರೊಳಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದರು. ಒಂದು ವೇಳೆ ಹೇಳಿಕೆ ಸಲ್ಲಿಸಲು ತಪ್ಪಿದಲ್ಲಿ ನಿಯಮಾನುಸಾರ ಮುಂದಿನ ಕ್ರಮಕೈಗೊಳ್ಳುವುದಾಗಿ ಎಚ್ಚರಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>