<p><strong>ಬೆಂಗಳೂರು</strong>: ಬಣ್ಣದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆ.ಪಿ. ಅಗ್ರಹಾರದ ಮಾರ್ಕಂಡೇಶ್ವರ ನಗರದ ನಿವಾಸಿ ಶರತ್ ಕುಮಾರ್ (30) ಕೊಲೆಯಾದವರು.</p>.<p>ಅಂಜನಪ್ಪ ಗಾರ್ಡನ್ನಲ್ಲಿ ನೆಲೆಸಿದ್ದ ಪರಿಚಯಸ್ಥರೊಬ್ಬರು ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಗುರುವಾರ ಬೆಳಿಗ್ಗೆ 6.30ರ ಸುಮಾರಿಗೆ ಶರತ್ ತೆರಳಿದ್ದರು. ಅಂತಿಮ ದರ್ಶನ ಪಡೆದು, ಸಮೀಪದಲ್ಲಿರುವ ಅಣ್ಣ ಪ್ರಭು ಅವರ ಮನೆಗೆ ಹೋಗಿದ್ದರು. ಆ ನಂತರ ಕೆ.ಪಿ.ಅಗ್ರಹಾರದ ಮನೆಗೆ ಹೋಗುವಾಗ ನಾಲ್ಕೈದು ಮಂದಿ ಶರತ್ ಜತೆ ಜಗಳ ಮಾಡಿದ್ದರು. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಆರೋಪಿಗಳು, ಶರತ್ ಹೊಟ್ಟೆಯ ಎಡಭಾಗಕ್ಕೆ ಚಾಕುವಿನಿಂದ ಚುಚ್ಚಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸರು ಹೇಳಿದರು.</p>.<p>ಮೃತರ ಪತ್ನಿ ಆನಂದಿ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>‘ಅಂತಿಮ ದರ್ಶನ ಸಂದರ್ಭದಲ್ಲಿ ಶರತ್ ಅವರು ಯುವತಿಯೊಬ್ಬರಿಗೆ ನಿಂದಿಸಿದ್ದರು ಎಂದು ಹೇಳಲಾಗಿದೆ. ಅದೇ ವಿಚಾರಕ್ಕೆ ಕೋಪಗೊಂಡಿರುವ ಯುವತಿ ಕಡೆಯವರು, ಶರತ್ ಅವರನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಸದ್ಯದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬಣ್ಣದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರೊಬ್ಬರನ್ನು ಕೊಲೆ ಮಾಡಲಾಗಿದ್ದು, ಈ ಸಂಬಂಧ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ಕೆ.ಪಿ. ಅಗ್ರಹಾರದ ಮಾರ್ಕಂಡೇಶ್ವರ ನಗರದ ನಿವಾಸಿ ಶರತ್ ಕುಮಾರ್ (30) ಕೊಲೆಯಾದವರು.</p>.<p>ಅಂಜನಪ್ಪ ಗಾರ್ಡನ್ನಲ್ಲಿ ನೆಲೆಸಿದ್ದ ಪರಿಚಯಸ್ಥರೊಬ್ಬರು ಮೃತಪಟ್ಟಿದ್ದರು. ಅವರ ಅಂತಿಮ ದರ್ಶನ ಪಡೆಯಲು ಗುರುವಾರ ಬೆಳಿಗ್ಗೆ 6.30ರ ಸುಮಾರಿಗೆ ಶರತ್ ತೆರಳಿದ್ದರು. ಅಂತಿಮ ದರ್ಶನ ಪಡೆದು, ಸಮೀಪದಲ್ಲಿರುವ ಅಣ್ಣ ಪ್ರಭು ಅವರ ಮನೆಗೆ ಹೋಗಿದ್ದರು. ಆ ನಂತರ ಕೆ.ಪಿ.ಅಗ್ರಹಾರದ ಮನೆಗೆ ಹೋಗುವಾಗ ನಾಲ್ಕೈದು ಮಂದಿ ಶರತ್ ಜತೆ ಜಗಳ ಮಾಡಿದ್ದರು. ಅದು ವಿಕೋಪಕ್ಕೆ ಹೋದಾಗ ಕೋಪಗೊಂಡ ಆರೋಪಿಗಳು, ಶರತ್ ಹೊಟ್ಟೆಯ ಎಡಭಾಗಕ್ಕೆ ಚಾಕುವಿನಿಂದ ಚುಚ್ಚಿದ್ದರು. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟರು ಎಂದು ಪೊಲೀಸರು ಹೇಳಿದರು.</p>.<p>ಮೃತರ ಪತ್ನಿ ಆನಂದಿ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.</p>.<p>‘ಅಂತಿಮ ದರ್ಶನ ಸಂದರ್ಭದಲ್ಲಿ ಶರತ್ ಅವರು ಯುವತಿಯೊಬ್ಬರಿಗೆ ನಿಂದಿಸಿದ್ದರು ಎಂದು ಹೇಳಲಾಗಿದೆ. ಅದೇ ವಿಚಾರಕ್ಕೆ ಕೋಪಗೊಂಡಿರುವ ಯುವತಿ ಕಡೆಯವರು, ಶರತ್ ಅವರನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ಗೊತ್ತಾಗಿದೆ. ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರದಲ್ಲೇ ಸದ್ಯದಲ್ಲೇ ಬಂಧಿಸಲಾಗುವುದು’ ಎಂದು ಪೊಲೀಸರು ಹೇಳಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>