ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು 2013ರಲ್ಲಿ ಮಾಗಡಿಯಲ್ಲಿ ಜಮೀನು ಖರೀದಿಸಿ ನಿವೇಶನ ಮಾಡಿ ಮಾರಾಟ ಮಾಡಿದ್ದರು. ನಿವೇಶನ ವಿಚಾರವಾಗಿ ತಕರಾರುಗಳು ಇದ್ದ ಕಾರಣ ಖರೀದಿ ಮಾಡಿದ್ದ 40ಕ್ಕೂ ಹೆಚ್ಚು ಜನರಿಗೆ ನಿವೇಶನವನ್ನು ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಆಸ್ತಿಯನ್ನು ವಾಪಸ್ ತೆಗೆದುಕೊಂಡು ತಮ್ಮ ಹಣವನ್ನು ಮರಳಿಸುವಂತೆ ಏಜೆಂಟ್ಗೆ ಮನವಿ ಮಾಡಿದ್ದರು. ಅದಕ್ಕೆ ಆತ ಸ್ಪಂದಿಸದ ಕಾರಣ ನಿವೇಶನ ಖರೀದಿಸಿದವರು, ಮಾಗಡಿ ಪೊಲೀಸ್ ಠಾಣೆಗೆ ಸಂಪರ್ಕಿಸಿದ್ದರು.