ಚಾಮರಾಜಪೇಟೆ ನಿವಾಸಿಯೊಬ್ಬರು ಸ್ವಯಂ ಉದ್ಯೋಗಕ್ಕೆ ನೆರವು ಕೋರಿ ಅರ್ಜಿ ಸಲ್ಲಿಸಿದ್ದರು. ಮಂಜೂರಾತಿಯಾಗಿದ್ದ ಹಣವನ್ನು ಬಿಡುಗಡೆ ಮಾಡುವಂತೆ ನಿಗಮದ ಬೆಂಗಳೂರು ಜಿಲ್ಲಾ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಿದ್ದರು. ಹಣ ಬಿಡುಗಡೆ ಮಾಡಲು ₹ 50,000 ಲಂಚ ನೀಡುವಂತೆ ದಶರಥ್ ಮತ್ತು ನಿಗಮದ ಜಿಲ್ಲಾ ವ್ಯವಸ್ಥಾಪಕ ಸುಬ್ಬಪ್ಪ ಬೇಡಿಕೆ ಇಟ್ಟಿದ್ದರು. ಈ ಕುರಿತು ಅರ್ಜಿದಾರರು ಎಸಿಬಿ ಬೆಂಗಳೂರು ನಗರ ಘಟಕದ ಕಚೇರಿಗೆ ದೂರು ಸಲ್ಲಿಸಿದ್ದರು.