ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣನಾಯಕನಪುರ ಗ್ರಾಮದ ನಿವಾಸಿ ಪ್ರದೀಪ್ ಎಂಬುವವರು ಅದೇ ಗ್ರಾಮದಲ್ಲಿರುವ ತಮ್ಮ ಜಮೀನಿನ ತತ್ಕಾಲ್ ಪೋಡಿ ಮಾಡಿ, ದಾಖಲೆ ಸಿದ್ಧಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ₹ 25,000 ಲಂಚ ನೀಡುವಂತೆ ಭೂಮಾಪಕ ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರದೀಪ್ ಎಸಿಬಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕಕ್ಕೆ ದೂರು ನೀಡಿದ್ದರು.