<p><strong>ಬೆಂಗಳೂರು: </strong>ಜಮೀನಿನ ತತ್ಕಾಲ್ ಪೋಡಿ ದಾಖಲೆ ಸಿದ್ಧಪಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹ 25,000 ಲಂಚ ಪಡೆಯುತ್ತಿದ್ದ ಆನೇಕಲ್ ತಾಲ್ಲೂಕು ಕಚೇರಿಯ ಭೂಮಾಪಕ ರತ್ನಕುಮಾರ್ ಕೆ.ಎಲ್. ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.</p>.<p>ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣನಾಯಕನಪುರ ಗ್ರಾಮದ ನಿವಾಸಿ ಪ್ರದೀಪ್ ಎಂಬುವವರು ಅದೇ ಗ್ರಾಮದಲ್ಲಿರುವ ತಮ್ಮ ಜಮೀನಿನ ತತ್ಕಾಲ್ ಪೋಡಿ ಮಾಡಿ, ದಾಖಲೆ ಸಿದ್ಧಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ₹ 25,000 ಲಂಚ ನೀಡುವಂತೆ ಭೂಮಾಪಕ ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರದೀಪ್ ಎಸಿಬಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕಕ್ಕೆ ದೂರು ನೀಡಿದ್ದರು.</p>.<p>ಪ್ರದೀಪ್ ಅವರಿಂದ ರತ್ನಕುಮಾರ್ ಮಂಗಳವಾರ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಗೋಪಾಲ್ ಜೋಗಿನ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಜಮೀನಿನ ತತ್ಕಾಲ್ ಪೋಡಿ ದಾಖಲೆ ಸಿದ್ಧಪಡಿಸಿಕೊಡಲು ವ್ಯಕ್ತಿಯೊಬ್ಬರಿಂದ ₹ 25,000 ಲಂಚ ಪಡೆಯುತ್ತಿದ್ದ ಆನೇಕಲ್ ತಾಲ್ಲೂಕು ಕಚೇರಿಯ ಭೂಮಾಪಕ ರತ್ನಕುಮಾರ್ ಕೆ.ಎಲ್. ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕದ ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.</p>.<p>ಆನೇಕಲ್ ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣನಾಯಕನಪುರ ಗ್ರಾಮದ ನಿವಾಸಿ ಪ್ರದೀಪ್ ಎಂಬುವವರು ಅದೇ ಗ್ರಾಮದಲ್ಲಿರುವ ತಮ್ಮ ಜಮೀನಿನ ತತ್ಕಾಲ್ ಪೋಡಿ ಮಾಡಿ, ದಾಖಲೆ ಸಿದ್ಧಪಡಿಸಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಪ್ರಕ್ರಿಯೆ ಪೂರ್ಣಗೊಳಿಸಲು ₹ 25,000 ಲಂಚ ನೀಡುವಂತೆ ಭೂಮಾಪಕ ಬೇಡಿಕೆ ಇಟ್ಟಿದ್ದರು. ಈ ಕುರಿತು ಪ್ರದೀಪ್ ಎಸಿಬಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕಕ್ಕೆ ದೂರು ನೀಡಿದ್ದರು.</p>.<p>ಪ್ರದೀಪ್ ಅವರಿಂದ ರತ್ನಕುಮಾರ್ ಮಂಗಳವಾರ ಲಂಚದ ಹಣ ಪಡೆಯುತ್ತಿದ್ದಾಗ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ಗೋಪಾಲ್ ಜೋಗಿನ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>