ನ್ಯಾಯಾಲಯದಿಂದ ಶೋಧನಾ ವಾರೆಂಟ್ ಪಡೆದು ಯಶವಂತಪುರದಲ್ಲಿರುವ ಮಂಜುನಾಥ್ ಅವರ ಫ್ಲ್ಯಾಟ್ ಮೇಲೆ ಮಂಗಳವಾರ ಬೆಳಿಗ್ಗೆ ದಾಳಿಮಾಡಿದ ಎಸಿಬಿ ಅಧಿಕಾರಿಗಳು, ರಾತ್ರಿಯವರೆಗೂ ಶೋಧ ನಡೆಸಿದರು. ಕೆಲವು ಮಹತ್ವದ ದಾಖಲೆಗಳನ್ನು ಅಧಿಕಾರಿಯ ನಿವಾಸದಿಂದ ವಶಪಡಿಸಿಕೊಂಡಿದ್ದು, ಪರಿಶೀಲಿಸಲಾಗುತ್ತಿದೆ ಎಂದು ತನಿಖಾ ಸಂಸ್ಥೆ ಹೇಳಿದೆ.