ಅಲ್ಲದೆ, ವಿವಿಧ ಇಲಾಖೆಗಳಲ್ಲಿ ಸರ್ಕಾರಿ ಕೆಲಸವನ್ನು ಗುತ್ತಿಗೆ ಆಧಾರದಲ್ಲಿ ಮಾಡಿಕೊಡುವುದಾಗಿ ನಂಬಿಸುತ್ತಿದ್ದ. ಲೋಕೋಪಯೋಗಿ ಇಲಾಖೆ ಸೇರಿದಂತೆ ಹಲವು ಇಲಾಖೆಗಳಲ್ಲಿ ಗುತ್ತಿಗೆದಾರರಿಗೆ ಕಾಮಗಾರಿಯ ಬಿಲ್ ಕ್ಲಿಯರ್ ಮಾಡಿಸುವುದಾಗಿ ಲಕ್ಷಾಂತರ ಹಣ ಪಡೆದಿದ್ದ. ಈ ವಿಷಯವನ್ನು ಕೆಲವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಳಿ ಹೇಳಿಕೊಂಡಿದ್ದರು. ಹೀಗಾಗಿ, ಗೃಹ ಸಚಿವರು ಸಿಸಿಬಿ ತನಿಖೆಗೆ ಜವಾಬ್ದಾರಿ ಹೊಣೆ ನೀಡಿದ್ದರು.