ಭೂಸ್ವಾಧೀನ, ಪರಿಹಾರ ವಿತರಣೆ, ನಿವೇಶನ ಹಂಚಿಕೆ ಸೇರಿದಂತೆ ವಿವಿಧ ಪ್ರಕ್ರಿಯೆಗಳಲ್ಲಿ ನಡೆದಿರುವ ಅಕ್ರಮಗಳಿಗೆ ಸಂಬಂಧಿಸಿದ ನೂರಾರು ಕಡತಗಳನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಎಲ್ಲ ಕಡತಗಳನ್ನೂ ತನಿಖಾ ಸಂಸ್ಥೆಯ ಕಚೇರಿಗೆ ತರಲಾಗಿದೆ. ಎಸ್ಪಿಗಳಾದ ಜಿ.ಎಚ್. ಯತೀಶ್ ಚಂದ್ರ, ಅಬ್ದುಲ್ ಅಹದ್ ಮತ್ತು ಉಮಾ ಪ್ರಶಾಂತ್ ನೇತೃತ್ವದಲ್ಲಿ ಮಂಗಳವಾರದಿಂದ ಈ ಕಡತಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ.