<p><strong>ಬೆಂಗಳೂರು: </strong>ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ರಾಜರಾಜೇಶ್ವರಿನಗರ ಉಪ ನೋಂದಣಿ ಕಚೇರಿ ಮೇಲೆ ಶುಕ್ರವಾರ ಸಂಜೆ ದಾಳಿಮಾಡಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು, ₹ 3.48 ಲಕ್ಷ ನಗದು ಮತ್ತು ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಎಸಿಬಿ ಬೆಂಗಳೂರು ನಗರ ಘಟಕದ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ತಡರಾತ್ರಿಯವರೆಗೂ ಶೋಧಕಾರ್ಯ ನಡೆಸಿದರು.</p>.<p>ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಭಾರಿ ಸಂಖ್ಯೆಯ ಜನರು ಉಪ ನೋಂದಣಿ ಕಚೇರಿಯ ಒಳಗಡೆ ಇದ್ದರು. ಕೆಲಸದ ನಿಮಿತ್ತ ಬಂದಿದ್ದವರನ್ನು ಹೊರಕ್ಕೆ ಕಳುಹಿಸಿದ ತನಿಖಾ ತಂಡ, ಸಂಶಯಾಸ್ಪದ ವ್ಯಕ್ತಿಗಳನ್ನು ಸ್ಥಳದಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಿದರು. ನೋಂದಣಿ ಶುಲ್ಕ ಸಂಗ್ರಹ ಕಡತ ಮತ್ತು ಕಚೇರಿಯಲ್ಲಿ ಲಭ್ಯವಾದ ನಗದು ತಾಳೆ ಮಾಡಿದರು. ಕಚೇರಿ ಸಂಕೀರ್ಣದ ಕೆಲವು ವಾಣಿಜ್ಯ ಮಳಿಗೆಗಳಲ್ಲೂ ಶೋಧ ನಡೆಸಿದರು.</p>.<p>‘ಒಟ್ಟು ₹ 3.48 ಲಕ್ಷ ನಗದು ಉಪ ನೋಂದಣಿ ಅಧಿಕಾರಿ ಕಚೇರಿಯಲ್ಲಿ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ವಶಪಡಿಸಿಕೊಳ್ಳಲಾಗಿದೆ. ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ದಾಖಲೆಗಳು, ಖಾಲಿ ದಸ್ತಾವೇಜು ಪತ್ರಗಳು ಖಾಸಗಿ ವ್ಯಕ್ತಿಗಳ ಬಳಿ ಪತ್ತೆಯಾಗಿವೆ. ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ’ ಎಂದು ಎಸಿಬಿ ಎಸ್ಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸ್ಥಿರಾಸ್ತಿ ನೋಂದಣಿ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿರುವ ಖಚಿತ ಮಾಹಿತಿ ಆಧರಿಸಿ ರಾಜರಾಜೇಶ್ವರಿನಗರ ಉಪ ನೋಂದಣಿ ಕಚೇರಿ ಮೇಲೆ ಶುಕ್ರವಾರ ಸಂಜೆ ದಾಳಿಮಾಡಿದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ದ ಅಧಿಕಾರಿಗಳು, ₹ 3.48 ಲಕ್ಷ ನಗದು ಮತ್ತು ಹಲವು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಸಾರ್ವಜನಿಕರು ನೀಡಿದ ಖಚಿತ ಮಾಹಿತಿ ಆಧರಿಸಿ ಎಸಿಬಿ ಅಧಿಕಾರಿಗಳು ದಿಢೀರ್ ಕಾರ್ಯಾಚರಣೆ ನಡೆಸಿದ್ದಾರೆ. ಎಸಿಬಿ ಬೆಂಗಳೂರು ನಗರ ಘಟಕದ ಎಸ್ಪಿ ಕುಲದೀಪ್ ಕುಮಾರ್ ಆರ್. ಜೈನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ತಡರಾತ್ರಿಯವರೆಗೂ ಶೋಧಕಾರ್ಯ ನಡೆಸಿದರು.</p>.<p>ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಸಂದರ್ಭದಲ್ಲಿ ಭಾರಿ ಸಂಖ್ಯೆಯ ಜನರು ಉಪ ನೋಂದಣಿ ಕಚೇರಿಯ ಒಳಗಡೆ ಇದ್ದರು. ಕೆಲಸದ ನಿಮಿತ್ತ ಬಂದಿದ್ದವರನ್ನು ಹೊರಕ್ಕೆ ಕಳುಹಿಸಿದ ತನಿಖಾ ತಂಡ, ಸಂಶಯಾಸ್ಪದ ವ್ಯಕ್ತಿಗಳನ್ನು ಸ್ಥಳದಲ್ಲೇ ಇರಿಸಿಕೊಂಡು ವಿಚಾರಣೆ ನಡೆಸಿದರು. ನೋಂದಣಿ ಶುಲ್ಕ ಸಂಗ್ರಹ ಕಡತ ಮತ್ತು ಕಚೇರಿಯಲ್ಲಿ ಲಭ್ಯವಾದ ನಗದು ತಾಳೆ ಮಾಡಿದರು. ಕಚೇರಿ ಸಂಕೀರ್ಣದ ಕೆಲವು ವಾಣಿಜ್ಯ ಮಳಿಗೆಗಳಲ್ಲೂ ಶೋಧ ನಡೆಸಿದರು.</p>.<p>‘ಒಟ್ಟು ₹ 3.48 ಲಕ್ಷ ನಗದು ಉಪ ನೋಂದಣಿ ಅಧಿಕಾರಿ ಕಚೇರಿಯಲ್ಲಿ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ವಶಪಡಿಸಿಕೊಳ್ಳಲಾಗಿದೆ. ಸ್ಥಿರಾಸ್ತಿ ನೋಂದಣಿಗೆ ಸಂಬಂಧಿಸಿದ ದಾಖಲೆಗಳು, ಖಾಲಿ ದಸ್ತಾವೇಜು ಪತ್ರಗಳು ಖಾಸಗಿ ವ್ಯಕ್ತಿಗಳ ಬಳಿ ಪತ್ತೆಯಾಗಿವೆ. ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ’ ಎಂದು ಎಸಿಬಿ ಎಸ್ಪಿ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>