‘ಸಮೇತನಹಳ್ಳಿ ಮತ್ತು ದೊಡ್ಡಗಟ್ಟಿಗಾನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೋಮಾಳ ಜಾಗವನ್ನು ಎರಡು ವರ್ಷಗಳಿಂದ ಅಕ್ರಮವಾಗಿ ಅನ್ಯರಿಗೆ ಖಾತೆ ಮಾಡಿಕೊಡಲಾಗಿದೆ ಎಂಬ ದೂರು ಬಂದಿತ್ತು. ಅದನ್ನು ಆಧರಿಸಿ ದಾಖಲೆ ವಶಕ್ಕೆ ಪಡೆಯಲಾಗಿದೆ. ತನಿಖೆ ಇನ್ನಷ್ಟೇ ನಡೆಯಬೇಕಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸಿಬಿ ಅಧಿಕಾರಿಗಳು ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.