ಬೆಂಗಳೂರು: ಬೆಂಗಳೂರು ಉತ್ತರ ಹೆಚ್ಚುವರಿ (ಯಲಹಂಕ) ತಾಲ್ಲೂಕಿನ ಚಿಕ್ಕಬೆಟ್ಟಹಳ್ಳಿ ಗ್ರಾಮದ ಗೋಮಾಳ ಜಮೀನಿನ ದಾಖಲೆ ಬದಲಾವಣೆ ಮಾಡಿ ಖಾಸಗಿ ಬಿಲ್ಡರ್ ಗಳಿಗೆ ಅನುಕೂಲ ಮಾಡಿಕೊಟ್ಟ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ), ಬೆಂಗಳೂರು ಮತ್ತು ತುಮಕೂರಿನ ಮೂರು ಕಡೆ ದಾಳಿ ಮಾಡಿ, ಶೋಧ ನಡೆಸುತ್ತಿದೆ.