ಎಸಿಬಿ ಬೆಂಗಳೂರು ನಗರ ಘಟಕದ 42 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡಿರುವ ಐದು ತಂಡಗಳು ಶುಕ್ರವಾರ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ನಡೆಸುತ್ತಿವೆ. ನ್ಯಾಯಾಂಗ ಬಡಾವಣೆಯಲ್ಲಿರುವ ರಂಗನಾಥ್ ಮನೆ, ದೊಡ್ಡಬಳ್ಳಾಪುರ ಪಟ್ಟಣದ ದತ್ತಾತ್ರೇಯ ಕಲ್ಯಾಣ ಮಂಟಪ ರಸ್ತೆಯಲ್ಲಿರುವ ಮನೆ, ಅಲ್ಲಿನ ಕನಕ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಶಾಲೆ ಹಾಗೂ ಬೆಂಗಳೂರಿನ ನಾಗರಭಾವಿಯಲ್ಲಿರುವ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.