ಪಾಲಿಕೆಯ ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ವಿ. ರವಿ ಅವರ ಜಯನಗರದ ನಿವಾಸ ಮತ್ತು ಪಾಲಿಕೆ ಪ್ರಧಾನ ಕಚೇರಿ ಆವರಣದಲ್ಲಿರುವ ಕಚೇರಿ, ಪಾಲಿಕೆ ಜಾಗೃತ ಕೋಶದ ಕಾರ್ಯನಿರ್ವಾಹಕ ಎಂಜಿನಿಯರ್ ವೆಂಕಟೇಶಪ್ಪ ಅವರ ಕಲ್ಯಾಣನಗರದ ಮನೆ ಹಾಗೂ ಪಾಲಿಕೆ ಪ್ರಧಾನ ಕಚೇರಿಯಲ್ಲಿರುವ ಕಚೇರಿ, ನಿವೃತ್ತ ಕಾರ್ಯನಿರ್ವಾಹಕ ಎಂಜಿನಿಯರ್ ಸುರೇಶ್ ಅವರ ಇಂದಿರಾನಗರದ ಮನೆ, ಪಾಲಿಕೆಯ ಸಹಾಯಕ ಕಾರ್ನಿರ್ವಾಹಕ ಎಂಜಿನಿಯರ್ ರಾಘವೇಂದ್ರ ಅವರ ಬನಶಂಕರಿ ಒಂದಲೇ ಹಂತದಲ್ಲಿರುವ ಮನೆಗಳ ಮೇಲೆ ಶನಿವಾರ ಬೆಳಿಗ್ಗೆಯೇ ದಾಳಿ ಮಾಡಿದ ಎಸಿಬಿ ಅಧಿಕಾರಿಗಳು, ಶೋಧ ನಡೆಸಿದ್ದಾರೆ.