ಎಲ್ಲೆಲ್ಲಿ ಶೋಧ: ನಾರಾಯಣ ಸ್ವಾಮಿ ಅವರ ಬೆಂಗಳೂರು ಜಯನಗರದಲ್ಲಿರುವ ವಾಸದ ಮನೆ, ಸಂಬಂಧಿಕರಿಗೆ ಸೇರಿದ ವಿನಾಯಕ ನಗರ ಮೇಡನಹಳ್ಳಿಯ ಮನೆ, ಕೋಲಾರದ ಎರಡು ಮನೆಗಳು, ಚಿಂತಾಮಣಿ ತಾಲ್ಲೂಕಿನಲ್ಲಿರುವ ಮನೆ ಮತ್ತು ಶಾಂತಿನಗರದಲ್ಲಿರುವ ಕಚೇರಿ; ಶಿವಶಂಕರ್ ಅವರ ರಾಮನಗರ ಅರ್ಕಾವತಿ ಬಡಾವಣೆ ನಿವಾಸ, ಸಂಬಂಧಿಕರಿಗೆ ಸೇರಿದ ದೊಡ್ಡಬಳ್ಳಾಪುರದ ಮನೆ, ರಾಮನಗರದ ಬಮೂಲ್ ಕಚೇರಿ; ಅರ್ಷದ್ ಪಾಷಾ ಅವರಿಗೆ ಸೇರಿದ ಮೈಸೂರು ಉದಯಗಿರಿಯಲ್ಲಿರುವ ಮನೆ, ಪಂಚಾಯತ್ ರಾಜ್ ಇಲಾಖೆ ಕಚೇರಿ, ಪಿರಿಯಾಪಟ್ಟಣ; ಚನ್ನೇಗೌಡರ ಅವರಿಗೆ ಸೇರಿರುವ ಹೇಮಾವತಿ ನಗರದ (ಹಾಸನ) ಮನೆ, ಹಾಸನದ ಸಂಬಂಧಿಕರ ಮನೆ ಮತ್ತು ಹಾಸನ ಪಿಡಬ್ಲ್ಯುಡಿ ಕಚೇರಿಗಳಲ್ಲಿ ಶೋಧ ನಡೆಸಲಾಗಿದೆ.