ಗುರುವಾರ ರಾತ್ರಿ ಠಾಣೆಯಲ್ಲೇ ಇನ್ಸ್ಪೆಕ್ಟರ್ ಪರವಾಗಿ ₹ 6 ಲಕ್ಷ ಲಂಚ ಪಡೆದ ಹೆಡ್ ಕಾನ್ಸ್ಟೆಬಲ್ ರಾಜು ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿತ್ತು. ಆಗಿನಿಂದಲೇ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು, ತಲೆಮರೆಸಿಕೊಂಡಿರುವ ಯಶವಂತ ನಾಲ್ಕು ದಿನ ಕಳೆದರೂ ಪತ್ತೆಯಾಗಿಲ್ಲ. ಆರೋಪಿ ಪತ್ತೆಗೆ ಬೆಂಗಳೂರು ನಗರ ಮತ್ತು ವಿವಿಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ.