ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ಸಮಯದಲ್ಲಿ ಯಶವಂತ ಠಾಣೆಯಿಂದ ಹೊರಗಿದ್ದರು. ಹೆಡ್ ಕಾನ್ಸ್ಟೆಬಲ್ ಬಂಧನದ ಸುದ್ದಿ ತಿಳಿದ ಬಳಿಕ ಇನ್ಸ್ಪೆಕ್ಟರ್ ಕೂಡ ಬಂಧನದ ಭೀತಿಯಿಂದ ಪರಾರಿಯಾಗಿದ್ದಾರೆ. ಇಲಾಖೆಯಿಂದ ನೀಡಿದ್ದ ರಿವಾಲ್ವರ್, ಚಿಕ್ಕಜಾಲ ಠಾಣೆಯ ಡೈರಿ ಸೇರಿದಂತೆ ಕರ್ತವ್ಯಕ್ಕೆ ಸಂಬಂಧಿಸಿದ ಕೆಲವು ವಸ್ತುಗಳನ್ನೂ ತಮ್ಮೊಂದಿಗೆ ಕೊಂಡೊಯ್ದಿರುವ ಅಧಿಕಾರಿ, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆಮರೆಸಿಕೊಂಡಿದ್ದಾರೆ.