<p><strong>ಬೆಂಗಳೂರು:</strong> ನಿವೇಶನದ ಖಾತಾ ಬದಲಾವಣೆ ಪ್ರಕ್ರಿಯೆ ಪೂರೈಸಲು ಬಿಬಿಎಂಪಿ ರಾಜರಾಜೇಶ್ವರಿ ವಲಯ ಕಚೇರಿಯ ತೆರಿಗೆ ನಿರೀಕ್ಷಕನ ಪರವಾಗಿ ₹ 7,000 ಲಂಚ ಪಡೆದ ದಲ್ಲಾಳಿಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿದೆ. ತೆರಿಗೆ ನಿರೀಕ್ಷಕ ತಲೆಮರೆಸಿಕೊಂಡಿದ್ದಾರೆ.</p>.<p>ತೆರಿಗೆ ನಿರೀಕ್ಷಕ ಬಾಬು ಎಂಬುವವರ ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ ಸಂತೋಷ್ ಎಂಬ ಖಾಸಗಿ ವ್ಯಕ್ತಿ ಬಂಧಿತ. ಬಾಬು ಹಾಗೂ ಇತರ ಆರೋಪಿಗಳು ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ವಿಷಯ ತಿಳಿದು ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕೆ ಶೋಧ ನಡೆದಿದೆ.</p>.<p>ರಾಜರಾಜೇಶ್ವರಿ ನಗರ ವಲಯ ಕಚೇರಿಯ ವ್ಯಾಪ್ತಿಯಲ್ಲಿ ಸ್ಥಿರಾಸ್ತಿ ಹೊಂದಿರುವ ವ್ಯಕ್ತಿಯೊಬ್ಬರು ಖಾತಾ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಅಧಿಕಾರಿ ಬಾಬು ಪರವಾಗಿ ಮಾತುಕತೆ ನಡೆಸಿದ್ದ ದಲ್ಲಾಳಿ ಸಂತೋಷ್, ₹ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಚೌಕಾಸಿ ಮಾಡಿದಾಗ ₹ 7,000 ನೀಡಿದರೆ ಖಾತಾ ಬದಲಾವಣೆ ಮಾಡುವುದಾಗಿ ಒಪ್ಪಿಕೊಂಡಿದ್ದ. ಈ ಕುರಿತು ಆಸ್ತಿ ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.</p>.<p>ಶುಕ್ರವಾರ ತೆರಿಗೆ ನಿರೀಕ್ಷಕರ ಕಚೇರಿಯಲ್ಲೇ ಲಂಚ ಪಡೆದ ಸಂತೋಷ್ನನ್ನು ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ. ಖಾತಾ ಬದಲಾವಣೆಗೆ ಸಂಬಂಧಿಸಿದ ಕಡತವನ್ನೂ ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ. ಎಸಿಬಿ ಬೆಂಗಳೂರು ನಗರ ಎಸ್.ಪಿ. ಯತೀಶ್ ಚಂದ್ರ ಜಿ.ಎಚ್. ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಿವೇಶನದ ಖಾತಾ ಬದಲಾವಣೆ ಪ್ರಕ್ರಿಯೆ ಪೂರೈಸಲು ಬಿಬಿಎಂಪಿ ರಾಜರಾಜೇಶ್ವರಿ ವಲಯ ಕಚೇರಿಯ ತೆರಿಗೆ ನಿರೀಕ್ಷಕನ ಪರವಾಗಿ ₹ 7,000 ಲಂಚ ಪಡೆದ ದಲ್ಲಾಳಿಯನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶುಕ್ರವಾರ ಬಂಧಿಸಿದೆ. ತೆರಿಗೆ ನಿರೀಕ್ಷಕ ತಲೆಮರೆಸಿಕೊಂಡಿದ್ದಾರೆ.</p>.<p>ತೆರಿಗೆ ನಿರೀಕ್ಷಕ ಬಾಬು ಎಂಬುವವರ ಕಚೇರಿಯಲ್ಲಿ ಮಧ್ಯವರ್ತಿಯಾಗಿದ್ದ ಸಂತೋಷ್ ಎಂಬ ಖಾಸಗಿ ವ್ಯಕ್ತಿ ಬಂಧಿತ. ಬಾಬು ಹಾಗೂ ಇತರ ಆರೋಪಿಗಳು ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ವಿಷಯ ತಿಳಿದು ನಾಪತ್ತೆಯಾಗಿದ್ದಾರೆ. ಅವರ ಬಂಧನಕ್ಕೆ ಶೋಧ ನಡೆದಿದೆ.</p>.<p>ರಾಜರಾಜೇಶ್ವರಿ ನಗರ ವಲಯ ಕಚೇರಿಯ ವ್ಯಾಪ್ತಿಯಲ್ಲಿ ಸ್ಥಿರಾಸ್ತಿ ಹೊಂದಿರುವ ವ್ಯಕ್ತಿಯೊಬ್ಬರು ಖಾತಾ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಅಧಿಕಾರಿ ಬಾಬು ಪರವಾಗಿ ಮಾತುಕತೆ ನಡೆಸಿದ್ದ ದಲ್ಲಾಳಿ ಸಂತೋಷ್, ₹ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಚೌಕಾಸಿ ಮಾಡಿದಾಗ ₹ 7,000 ನೀಡಿದರೆ ಖಾತಾ ಬದಲಾವಣೆ ಮಾಡುವುದಾಗಿ ಒಪ್ಪಿಕೊಂಡಿದ್ದ. ಈ ಕುರಿತು ಆಸ್ತಿ ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.</p>.<p>ಶುಕ್ರವಾರ ತೆರಿಗೆ ನಿರೀಕ್ಷಕರ ಕಚೇರಿಯಲ್ಲೇ ಲಂಚ ಪಡೆದ ಸಂತೋಷ್ನನ್ನು ಎಸಿಬಿ ಡಿವೈಎಸ್ಪಿ ಪ್ರತಾಪ್ ರೆಡ್ಡಿ ನೇತೃತ್ವದ ತಂಡ ಬಂಧಿಸಿದೆ. ಖಾತಾ ಬದಲಾವಣೆಗೆ ಸಂಬಂಧಿಸಿದ ಕಡತವನ್ನೂ ಆರೋಪಿಯಿಂದ ವಶಕ್ಕೆ ಪಡೆಯಲಾಗಿದೆ. ಎಸಿಬಿ ಬೆಂಗಳೂರು ನಗರ ಎಸ್.ಪಿ. ಯತೀಶ್ ಚಂದ್ರ ಜಿ.ಎಚ್. ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>