ರಾಜರಾಜೇಶ್ವರಿ ನಗರ ವಲಯ ಕಚೇರಿಯ ವ್ಯಾಪ್ತಿಯಲ್ಲಿ ಸ್ಥಿರಾಸ್ತಿ ಹೊಂದಿರುವ ವ್ಯಕ್ತಿಯೊಬ್ಬರು ಖಾತಾ ಬದಲಾವಣೆ ಕೋರಿ ಅರ್ಜಿ ಸಲ್ಲಿಸಿದ್ದರು. ಅಧಿಕಾರಿ ಬಾಬು ಪರವಾಗಿ ಮಾತುಕತೆ ನಡೆಸಿದ್ದ ದಲ್ಲಾಳಿ ಸಂತೋಷ್, ₹ 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಚೌಕಾಸಿ ಮಾಡಿದಾಗ ₹ 7,000 ನೀಡಿದರೆ ಖಾತಾ ಬದಲಾವಣೆ ಮಾಡುವುದಾಗಿ ಒಪ್ಪಿಕೊಂಡಿದ್ದ. ಈ ಕುರಿತು ಆಸ್ತಿ ಮಾಲೀಕರು ಎಸಿಬಿ ಬೆಂಗಳೂರು ನಗರ ಘಟಕಕ್ಕೆ ದೂರು ನೀಡಿದ್ದರು.