<p><strong>ಬೆಂಗಳೂರು</strong>: ಜಮೀನು ವಿವಾದ ಸಂಬಂಧ ಠಾಣೆಯಲ್ಲಿ ದಾಖಲಿಸಿದ್ದ ದೂರು ವಾಪಸು ಪಡೆಯದ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿಸಿರುವ ಘಟನೆ ಕೆ.ಆರ್. ಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಸಿಗೇಹಳ್ಳಿ ನಿವಾಸಿ ಪ್ರಭಾವತಿ (38) ಅವರ ಎದೆ ಮತ್ತು ಎಡಗೈಗೆ ಆ್ಯಸಿಡ್ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ರವಿ, ರಘು, ಕಬಾಲನ್, ಆಶೀರ್ವಾದಂ, ಮುನಿರೆಡ್ಡಿ, ಸಚಿನ್, ಕುಮಾರೇಶನ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>ಪತಿ ರಾಧಾಕೃಷ್ಣ ರೆಡ್ಡಿ ಮತ್ತು ಇಬ್ಬರು ಮಕ್ಕಳ ಜತೆ ಪ್ರಭಾವತಿ ಸ್ವಂತ ಮನೆಯಲ್ಲಿ ನೆಲೆಸಿದ್ದಾರೆ. ಅದೇ ಗ್ರಾಮದಲ್ಲಿ ಅವರಿಗೆ ಸೇರಿದ ಒಂದು ಎಕರೆ ಆರು ಗುಂಟೆ ಜಮೀನಿದೆ. ಜಮೀನಿ<br />ನಲ್ಲಿ ರಾಧಾಕೃಷ್ಣ 20 ಮನೆಗಳನ್ನು ಕಟ್ಟಿ, ಬಾಡಿಗೆಗೆ ಕೊಟ್ಟಿದ್ದಾರೆ. ಉಳಿದ ಜಾಗ ತಮ್ಮದೆಂದು ರವಿ, ಕುಮಾರ್, ಆಶೀರ್ವಾದ, ಶೇಖರ್ ಎರಡು ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು.</p>.<p>ಸ್ಥಳಕ್ಕೆ ಬಂದಿದ್ದ ಕೆ.ಆರ್. ಪುರ ಠಾಣೆಯ ಅಂದಿನ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಕೂಡ ರಾಧಾಕೃಷ್ಣ ಅವರ ಕುಟುಂಬದವರಿಗೆ ನಿಂದಿಸಿ, ಗುಂಡು ಹಾರಿಸಿ ಹತ್ಯೆ ಮಾಡುವುದಾಗಿ ಬೆದರಿಸಿದ್ದರು. ಈ ಸಂಬಂಧ ರಾಧಾಕೃಷ್ಣ ಕುಟುಂಬ ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದರು. ಅಲ್ಲದೆ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಇತರ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪ್ರಕರಣ ಹಿಂಪಡೆಯುವಂತೆ ಬೆದರಿ ಕೆಒಡ್ಡುತ್ತಿದ್ದರು ಎಂದು ಹೇಳಲಾಗಿದೆ.</p>.<p>ದೂರು ಹಿಂಪಡೆಯದಿದ್ದರೆ ಒಂದು ಗತಿ ಕಾಣಿಸುತ್ತೇನೆ’ ಎಂದು ಆಶೀರ್ವಾದಂ ಹೆದರಿಸಿದ್ದಾನೆ. ಇದಕ್ಕೆ ಪ್ರಭಾವತಿ ಪ್ರತಿಕ್ರಿಯಿಸಿಲ್ಲ. ಈ ವೇಳೆ ಹಿಂದಿನಿಂದ, ದ್ವಿಚಕ್ರ ವಾಹನದಲ್ಲಿ ಬಂದು ಆ್ಯಸಿಡ್ ಎರಚಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜಮೀನು ವಿವಾದ ಸಂಬಂಧ ಠಾಣೆಯಲ್ಲಿ ದಾಖಲಿಸಿದ್ದ ದೂರು ವಾಪಸು ಪಡೆಯದ ಕಾರಣಕ್ಕೆ ಮಹಿಳೆಯೊಬ್ಬರ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿಸಿರುವ ಘಟನೆ ಕೆ.ಆರ್. ಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.</p>.<p>ಸಿಗೇಹಳ್ಳಿ ನಿವಾಸಿ ಪ್ರಭಾವತಿ (38) ಅವರ ಎದೆ ಮತ್ತು ಎಡಗೈಗೆ ಆ್ಯಸಿಡ್ ಬಿದ್ದಿದ್ದು ಅಪಾಯದಿಂದ ಪಾರಾಗಿದ್ದಾರೆ.</p>.<p>ಪ್ರಕರಣಕ್ಕೆ ಸಂಬಂಧಿಸಿ ರವಿ, ರಘು, ಕಬಾಲನ್, ಆಶೀರ್ವಾದಂ, ಮುನಿರೆಡ್ಡಿ, ಸಚಿನ್, ಕುಮಾರೇಶನ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದರು.</p>.<p>ಪತಿ ರಾಧಾಕೃಷ್ಣ ರೆಡ್ಡಿ ಮತ್ತು ಇಬ್ಬರು ಮಕ್ಕಳ ಜತೆ ಪ್ರಭಾವತಿ ಸ್ವಂತ ಮನೆಯಲ್ಲಿ ನೆಲೆಸಿದ್ದಾರೆ. ಅದೇ ಗ್ರಾಮದಲ್ಲಿ ಅವರಿಗೆ ಸೇರಿದ ಒಂದು ಎಕರೆ ಆರು ಗುಂಟೆ ಜಮೀನಿದೆ. ಜಮೀನಿ<br />ನಲ್ಲಿ ರಾಧಾಕೃಷ್ಣ 20 ಮನೆಗಳನ್ನು ಕಟ್ಟಿ, ಬಾಡಿಗೆಗೆ ಕೊಟ್ಟಿದ್ದಾರೆ. ಉಳಿದ ಜಾಗ ತಮ್ಮದೆಂದು ರವಿ, ಕುಮಾರ್, ಆಶೀರ್ವಾದ, ಶೇಖರ್ ಎರಡು ವರ್ಷಗಳಿಂದ ಕಿರುಕುಳ ನೀಡುತ್ತಿದ್ದರು.</p>.<p>ಸ್ಥಳಕ್ಕೆ ಬಂದಿದ್ದ ಕೆ.ಆರ್. ಪುರ ಠಾಣೆಯ ಅಂದಿನ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಮತ್ತು ಸಿಬ್ಬಂದಿ ಕೂಡ ರಾಧಾಕೃಷ್ಣ ಅವರ ಕುಟುಂಬದವರಿಗೆ ನಿಂದಿಸಿ, ಗುಂಡು ಹಾರಿಸಿ ಹತ್ಯೆ ಮಾಡುವುದಾಗಿ ಬೆದರಿಸಿದ್ದರು. ಈ ಸಂಬಂಧ ರಾಧಾಕೃಷ್ಣ ಕುಟುಂಬ ಹಿರಿಯ ಅಧಿಕಾರಿಗಳ ಮೊರೆ ಹೋಗಿದ್ದರು. ಅಲ್ಲದೆ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಇತರ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಪ್ರಕರಣ ಹಿಂಪಡೆಯುವಂತೆ ಬೆದರಿ ಕೆಒಡ್ಡುತ್ತಿದ್ದರು ಎಂದು ಹೇಳಲಾಗಿದೆ.</p>.<p>ದೂರು ಹಿಂಪಡೆಯದಿದ್ದರೆ ಒಂದು ಗತಿ ಕಾಣಿಸುತ್ತೇನೆ’ ಎಂದು ಆಶೀರ್ವಾದಂ ಹೆದರಿಸಿದ್ದಾನೆ. ಇದಕ್ಕೆ ಪ್ರಭಾವತಿ ಪ್ರತಿಕ್ರಿಯಿಸಿಲ್ಲ. ಈ ವೇಳೆ ಹಿಂದಿನಿಂದ, ದ್ವಿಚಕ್ರ ವಾಹನದಲ್ಲಿ ಬಂದು ಆ್ಯಸಿಡ್ ಎರಚಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>