ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆ ಅಪಘಾತ: ಸಾವಿನಲ್ಲೂ ಸಾರ್ಥಕತೆ

Last Updated 12 ಫೆಬ್ರುವರಿ 2020, 20:21 IST
ಅಕ್ಷರ ಗಾತ್ರ

ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 35 ವರ್ಷದ ವ್ಯಕ್ತಿಯೊಬ್ಬರು ತಮ್ಮ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಆರು ಮಂದಿಗೆ ಬೆಳಕಾಗಿದ್ದಾರೆ.

ಕುಣಿಗಲ್‌ನ ನಿವಾಸಿಯಾದ ಯುವಕ ನಗರದ ಸುಂಕದಕಟ್ಟೆ ಬಳಿ ಬೈಕಿನಿಂದ ಬಿದ್ದು, ಗಾಯಗೊಂಡಿದ್ದರು. ಮಿದುಳಿಗೆ ತೀವ್ರ ಹಾನಿಯಾಗಿತ್ತು. ತುರ್ತು ಚಿಕಿತ್ಸೆಗೆ ಬಿಆರ್‌ ಲೈಫ್ ಎಸ್‌ಎಸ್‌ಎನ್‌ಎಂಸಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಿಸದ ಪರಿಣಾಮ ವ್ಯಕ್ತಿಯ ಮಿದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರಿಗೆ ಅಂಗಾಂಗ ದಾನದ ಮಹತ್ವ ತಿಳಿಸಿ, ಸಮ್ಮತಿ ಪಡೆದುಕೊಂಡರು.

ವ್ಯಕ್ತಿಯಯಕೃತ್ತು, ಮೂತ್ರಪಿಂಡಗಳು, ಶ್ವಾಸಕೋಶಗಳು, ಹೃದಯದ ಕವಾಟ ಹಾಗೂ ಕಣ್ಣು ಗುಡ್ಡೆಯನ್ನು ದಾನ ಪಡೆದಿದ್ದು, ಅಂಗಾಂಗಗಳಿಗೆ ಎದುರು ನೋಡುತ್ತಿದ್ದಆರು ಮಂದಿಗೆ ವೈದ್ಯರು ಕಸಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT