ಕುಣಿಗಲ್ನ ನಿವಾಸಿಯಾದ ಯುವಕ ನಗರದ ಸುಂಕದಕಟ್ಟೆ ಬಳಿ ಬೈಕಿನಿಂದ ಬಿದ್ದು, ಗಾಯಗೊಂಡಿದ್ದರು. ಮಿದುಳಿಗೆ ತೀವ್ರ ಹಾನಿಯಾಗಿತ್ತು. ತುರ್ತು ಚಿಕಿತ್ಸೆಗೆ ಬಿಆರ್ ಲೈಫ್ ಎಸ್ಎಸ್ಎನ್ಎಂಸಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆ ಫಲಿಸದ ಪರಿಣಾಮ ವ್ಯಕ್ತಿಯ ಮಿದುಳು ನಿಷ್ಕ್ರೀಯಗೊಂಡಿದೆ ಎಂದು ಘೋಷಿಸಿದ ವೈದ್ಯರು, ಕುಟುಂಬದ ಸದಸ್ಯರಿಗೆ ಅಂಗಾಂಗ ದಾನದ ಮಹತ್ವ ತಿಳಿಸಿ, ಸಮ್ಮತಿ ಪಡೆದುಕೊಂಡರು.