‘ಎಚ್ಎಎಲ್ ನಿವೃತ್ತ ನೌಕರ ಶ್ರೀಧರ್, ಏರ್ಟಿಗಾ ಕಾರು ಚಲಾಯಿಸಿಕೊಂಡು ಹೊರಟಿದ್ದಾಗ ಅಪಘಾತವಾಗಿತ್ತು. ಪ್ರಕರಣದ ವಿಚಾರಣೆಗೆ ಬರುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು. ಬಂಧನದ ಭೀತಿಯಲ್ಲಿದ್ದ ಅವರು, ವಕೀಲರ ಮೂಲಕ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ. ಠಾಣೆಗೆ ವಿಚಾರಣೆಗೆ ಬಂದು ಹೇಳಿಕೆ ನೀಡಿದ್ದಾರೆ’ ಎಂದೂ ಪೊಲೀಸ್ ಮೂಲಗಳು ಹೇಳಿವೆ.