ಟಿಪ್ಪರ್ಗೆ ಗುದ್ದಿದ ಬೈಕ್; ‘ತರಹುಣಸೆ ಗ್ರಾಮದ ಕೃಷ್ಣಪ್ಪ, ಹುಣಸಮಾರನಹಳ್ಳಿಯ ಸರ್ವೀಸ್ ರಸ್ತೆಯಲ್ಲಿ ಭಾನುವಾರ ಬೆಳಿಗ್ಗೆ 5.30ರ ಸುಮಾರಿಗೆ ಬೈಕ್ನಲ್ಲಿ ಹೊರಟಿದ್ದರು. ಟಿಪ್ಪರ್ ವಾಹನಕ್ಕೆ ಬೈಕ್ ಗುದ್ದಿತ್ತು. ತೀವ್ರ ಗಾಯಗೊಂಡ ಕೃಷ್ಣಪ್ಪ, ಸ್ಥಳದಲ್ಲೇ ಮೃತಪಟ್ಟರು’ ಎಂದು ಚಿಕ್ಕಜಾಲ ಸಂಚಾರ ಪೊಲೀಸರು ಹೇಳಿದರು.