ಬೆಂಗಳೂರು: ಇಂದಿರಾನಗರದ ಬಿನ್ನಮಂಗಲ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಒಬ್ಬ ಮೃತಪಟ್ಟಿದ್ದಾರೆ.
ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ಕಾರಿಗಳಿಗೆ ಹಿಂದಿನಿಂದ ಸಿಲಿಂಡರ್ ತುಂಬಿದ್ದ ಲಾರಿಯಿಂದ ಡಿಕ್ಕಿ ಹೊಡೆದಿ ಪರಿಣಾಮ ಕಾರು ಚಾಲಕ ರಾಮಚಂದ್ರ ಎಂಬುವವರು ಮೃತಪಟ್ಟಿದ್ದಾರೆ. ಅವರನ್ನು ಮೈಸೂರು ನಿವಾಸಿ ಎಂಬುದಾಗಿ ತಿಳಿದುಬಂದಿದೆ.
ಸ್ಥಳಕ್ಕೆ ಹಲಸೂರು ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಕಾರಿನ ಏರ್ ಬ್ಯಾಗ್ ತೆರೆದು ಇನ್ನೊಬ್ಬ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಪಘಾತದ ನಂತರ ಲಾರಿ ತೊರೆದು ಚಾಲಕ ತಪ್ಪಿಸಿಕೊಂಡು ಓಡಿಹೋಗಿದ್ದಾನೆ.