‘ಬ್ಯಾಟರಾಯನಪುರ–ಕೊಡಿಗೇಹಳ್ಳಿ ಸರ್ವೀಸ್ ರಸ್ತೆಬದಿಯಲ್ಲಿ ಕಾಮಗಾರಿ ನಡೆಯುತ್ತಿದ್ದು, ಈ ಜಾಗದಲ್ಲಿ ಜನ ಓಡಾಡದಂತೆ ಬ್ಯಾರಿಕೇಡ್ಗಳನ್ನು ನಿಲ್ಲಿಸಲಾಗಿದೆ. ಇದೇ ರಸ್ತೆಯಲ್ಲಿ ಹೊರಟಿದ್ದ ಚಾಲಕ, ಕಾರನ್ನು ನಿರ್ಲಕ್ಷ್ಯದಿಂದ ಚಲಾಯಿಸಿದ್ದರು. ಬ್ಯಾರಿಕೇಡ್ಗೆ ಡಿಕ್ಕಿ ಹೊಡೆದಿದ್ದ ಕಾರು, ನಂತರ ಅಂಗಡಿಯೊಂದಕ್ಕೆ ನುಗ್ಗಿತ್ತು. ಕಾರಿನಲ್ಲೇ ಸಿಲುಕಿ ತೀವ್ರ ಗಾಯಗೊಂಡಿದ್ದ ಮಂಜುನಾಥ್, ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ತಿಳಿಸಿದರು.