‘ಸಂಪಿಗೆಹಳ್ಳಿ ನಿವಾಸಿ ರಾಮಯ್ಯ, ಸಂಬಂಧಿ ಯುವತಿಯೊಬ್ಬರಿಗೆ ಸಾತನೂರಿನಲ್ಲಿ ವರನನ್ನು ನೋಡಿಕೊಂಡು ದ್ವಿಚಕ್ರ ವಾಹನದಲ್ಲಿ ಮಾರ್ಚ್ 31ರಂದು ಮಧ್ಯಾಹ್ನ ಮನೆಗೆ ವಾಪಸು ಹೊರಟಿದ್ದರು. ಅವರ ವಾಹನಕ್ಕೆ ಬಿಬಿಎಂಪಿ ಕಸ ಸಾಗಣೆ ಲಾರಿ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ರಾಮಯ್ಯ ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.