ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ಬಿಬಿಎಂಪಿ ಲಾರಿ ಚಾಲಕ ಬಂಧನ

Last Updated 3 ಏಪ್ರಿಲ್ 2022, 20:40 IST
ಅಕ್ಷರ ಗಾತ್ರ

ಬೆಂಗಳೂರು: ಬಾಗಲೂರು ಬಳಿ ಸಂಭವಿಸಿದ್ದ ಅಪಘಾತದಲ್ಲಿ ರಾಮಯ್ಯ (76) ಎಂಬುವರು ಮೃತಪಟ್ಟ ಪ್ರಕರಣ ಸಂಬಂಧ, ಬಿಬಿಎಂಪಿ ಕಸ ಸಾಗಣೆ ಲಾರಿ ಚಾಲಕ ಆಂಜನಪ್ಪ ಅವರನ್ನು ಚಿಕ್ಕಜಾಲ ಸಂಚಾರ ಪೊಲೀಸರು ಬಂಧಿಸಿದ್ದಾರೆ.

‘ಸಂಪಿಗೆಹಳ್ಳಿ ನಿವಾಸಿ ರಾಮಯ್ಯ, ಸಂಬಂಧಿ ಯುವತಿಯೊಬ್ಬರಿಗೆ ಸಾತನೂರಿನಲ್ಲಿ ವರನನ್ನು ನೋಡಿಕೊಂಡು ದ್ವಿಚಕ್ರ ವಾಹನದಲ್ಲಿ ಮಾರ್ಚ್ 31ರಂದು ಮಧ್ಯಾಹ್ನ ಮನೆಗೆ ವಾಪಸು ಹೊರಟಿದ್ದರು. ಅವರ ವಾಹನಕ್ಕೆ ಬಿಬಿಎಂಪಿ ಕಸ ಸಾಗಣೆ ಲಾರಿ ಡಿಕ್ಕಿ ಹೊಡೆದಿತ್ತು. ತೀವ್ರ ಗಾಯಗೊಂಡ ರಾಮಯ್ಯ ಮೃತಪಟ್ಟಿದ್ದರು’ ಎಂದು ಪೊಲೀಸರು ಹೇಳಿದರು.

‘ಬಿಬಿಎಂಪಿ ಲಾರಿ ಚಾಲಕನ ನಿರ್ಲಕ್ಷ್ಯ ಹಾಗೂ ಅತೀ ವೇಗದ ಚಾಲನೆಯಿಂದ ಅಪಘಾತ ಸಂಭವಿಸಿರುವುದು ಮೇಲ್ನೋಟಕ್ಕೆ ಗೊತ್ತಾಗಿತ್ತು. ರಾಮಯ್ಯ ಪುತ್ರ ರಾಜಶೇಖರ್ ನೀಡಿದ್ದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅಪಘಾತದ ನಂತರ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದರು. ಕೆಲವರು ನೀಡಿದ್ದ ಸುಳಿವಿನ ಆಧಾರದಲ್ಲಿ ಆರೋಪಿ ಇದ್ದ ಸ್ಥಳವನ್ನು ಪತ್ತೆ ಮಾಡಿ ಅವರನ್ನು ಬಂಧಿಸಲಾಗಿದೆ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT