<p><strong>ಬೆಂಗಳೂರು</strong>: ನೈಸ್ ರಸ್ತೆಯ ಕನಕಪುರ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಸಂಧ್ಯಾ (21) ಎಂಬುವರು ಮೃತಪಟ್ಟಿದ್ದಾರೆ.</p>.<p>‘ತಾತಗುಣಿ ಎಸ್ಟೇಟ್ ನಿವಾಸಿ ಸಂಧ್ಯಾ, ಪತಿ ಪೆರುಮಾಳ್ (30) ಹಾಗೂ ಒಂದೂವರೆ ವರ್ಷದ ಗಂಡು ಮಗುವಿನ ಜೊತೆ ಬೈಕ್ನಲ್ಲಿ ಹೊರಟಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪೆರುಮಾಳ್ ಹಾಗೂ ಮಗು ಗಾಯಗೊಂಡಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ಸಂಧ್ಯಾ ತವರು ಮನೆ ತಮಿಳುನಾಡು. ಅವರ ಸಹೋದರನ ನಿಶ್ಚಿತಾರ್ಥವನ್ನು ಗುರುವಾರ ಏರ್ಪಡಿಸಲಾಗಿತ್ತು. ಹೀಗಾಗಿ, ಪತಿ ಹಾಗೂ ಮಗುವಿನ ಜೊತೆಯಲ್ಲಿ ತಮಿಳುನಾಡಿಗೆ ಹೊರಟಿದ್ದರು. ಪತಿ ಬೈಕ್ ಚಲಾಯಿಸುತ್ತಿದ್ದರು. ಕನಕಪುರ ಟೋಲ್ ಬಳಿ ಅತೀ ವೇಗವಾಗಿ ಬಂದ್ ಟಿಪ್ಪರ್ ಲಾರಿ, ಬೈಕ್ಗೆ ಡಿಕ್ಕಿ ಹೊಡೆದಿತ್ತು.’</p>.<p>‘ಮೂವರೂ ರಸ್ತೆಗೆ ಬಿದ್ದಿದ್ದರು. ಸಂಧ್ಯಾ ಅವರ ದೇಹವನ್ನು ಟಿಪ್ಪರ್ ಲಾರಿ ಉಜ್ಜಿಕೊಂಡು ಹೋಗಿತ್ತು. ತೀವ್ರ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದೂ ಪೊಲೀಸರು ವಿವರಿಸಿದರು.</p>.<p class="Subhead"><strong>ಮಗು ಉಳಿಸಿಕೊಂಡ ತಂದೆ:</strong> ‘ಅಪಘಾತ ಸಂಭವಿಸಿದ್ದ ವೇಳೆ ತಾಯಿ ಸಂಧ್ಯಾ ಪಕ್ಕದಲ್ಲೇ ಮಗು ಬಿದ್ದಿತ್ತು. ಪೆರುಮಾಳು ಅವರು ಮಗುವನ್ನು ಎಳೆದುಕೊಂಡು ರಸ್ತೆ ಪಕ್ಕಕ್ಕೆ ಉರುಳಿದ್ದರು. ಪತ್ನಿಯನ್ನು ಎಳೆದುಕೊಳ್ಳಬೇಕು ಎನ್ನುಷ್ಟರಲ್ಲೇ ಲಾರಿ ಉಜ್ಜಿಕೊಂಡು ಹೋಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಪೆರುಮಾಳ್ ಹಾಗೂ ಮಗುವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಪಘಾತಕ್ಕೆ ಕಾರಣನಾದ ಆರೋಪದಡಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನೈಸ್ ರಸ್ತೆಯ ಕನಕಪುರ ಟೋಲ್ ಗೇಟ್ ಬಳಿ ಗುರುವಾರ ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಸಂಧ್ಯಾ (21) ಎಂಬುವರು ಮೃತಪಟ್ಟಿದ್ದಾರೆ.</p>.<p>‘ತಾತಗುಣಿ ಎಸ್ಟೇಟ್ ನಿವಾಸಿ ಸಂಧ್ಯಾ, ಪತಿ ಪೆರುಮಾಳ್ (30) ಹಾಗೂ ಒಂದೂವರೆ ವರ್ಷದ ಗಂಡು ಮಗುವಿನ ಜೊತೆ ಬೈಕ್ನಲ್ಲಿ ಹೊರಟಿದ್ದಾಗ ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪೆರುಮಾಳ್ ಹಾಗೂ ಮಗು ಗಾಯಗೊಂಡಿದೆ’ ಎಂದು ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣೆ ಪೊಲೀಸರು ಹೇಳಿದರು.</p>.<p>‘ಸಂಧ್ಯಾ ತವರು ಮನೆ ತಮಿಳುನಾಡು. ಅವರ ಸಹೋದರನ ನಿಶ್ಚಿತಾರ್ಥವನ್ನು ಗುರುವಾರ ಏರ್ಪಡಿಸಲಾಗಿತ್ತು. ಹೀಗಾಗಿ, ಪತಿ ಹಾಗೂ ಮಗುವಿನ ಜೊತೆಯಲ್ಲಿ ತಮಿಳುನಾಡಿಗೆ ಹೊರಟಿದ್ದರು. ಪತಿ ಬೈಕ್ ಚಲಾಯಿಸುತ್ತಿದ್ದರು. ಕನಕಪುರ ಟೋಲ್ ಬಳಿ ಅತೀ ವೇಗವಾಗಿ ಬಂದ್ ಟಿಪ್ಪರ್ ಲಾರಿ, ಬೈಕ್ಗೆ ಡಿಕ್ಕಿ ಹೊಡೆದಿತ್ತು.’</p>.<p>‘ಮೂವರೂ ರಸ್ತೆಗೆ ಬಿದ್ದಿದ್ದರು. ಸಂಧ್ಯಾ ಅವರ ದೇಹವನ್ನು ಟಿಪ್ಪರ್ ಲಾರಿ ಉಜ್ಜಿಕೊಂಡು ಹೋಗಿತ್ತು. ತೀವ್ರ ಗಾಯಗೊಂಡಿದ್ದ ಸಂಧ್ಯಾ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದರು’ ಎಂದೂ ಪೊಲೀಸರು ವಿವರಿಸಿದರು.</p>.<p class="Subhead"><strong>ಮಗು ಉಳಿಸಿಕೊಂಡ ತಂದೆ:</strong> ‘ಅಪಘಾತ ಸಂಭವಿಸಿದ್ದ ವೇಳೆ ತಾಯಿ ಸಂಧ್ಯಾ ಪಕ್ಕದಲ್ಲೇ ಮಗು ಬಿದ್ದಿತ್ತು. ಪೆರುಮಾಳು ಅವರು ಮಗುವನ್ನು ಎಳೆದುಕೊಂಡು ರಸ್ತೆ ಪಕ್ಕಕ್ಕೆ ಉರುಳಿದ್ದರು. ಪತ್ನಿಯನ್ನು ಎಳೆದುಕೊಳ್ಳಬೇಕು ಎನ್ನುಷ್ಟರಲ್ಲೇ ಲಾರಿ ಉಜ್ಜಿಕೊಂಡು ಹೋಗಿತ್ತು’ ಎಂದು ಪೊಲೀಸರು ಹೇಳಿದರು.</p>.<p>‘ಪೆರುಮಾಳ್ ಹಾಗೂ ಮಗುವಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅಪಘಾತಕ್ಕೆ ಕಾರಣನಾದ ಆರೋಪದಡಿ ಟಿಪ್ಪರ್ ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ’ ಎಂದೂ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>